Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕಡಿಯಾಳಿ ವಲಯ ಬ್ರಾಹ್ಮಣ ಸಮಿತಿಯ ವಾರ್ಷಿಕೋತ್ಸವ.

ಕಡಿಯಾಳಿ ವಲಯ ಬ್ರಾಹ್ಮಣ ಸಮಿತಿಯ 26 ನೇ ವಾರ್ಷಿಕೋತ್ಸವವು ವಲಯದ ಅಧ್ಯಕ್ಷರಾದ ಶ್ರೀ ಕುಂಜಿತ್ತಾಯ ಶ್ರೀನಿವಾಸ ಉಪಾಧ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀ ಮಂಜುನಾಥ ಉಪಾಧ್ಯ ಹಾಗೂ ಕಾರ್ಯದರ್ಶಿ ಶ್ರೀ ಸಂದೀಪ್ ಮಂಜ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಹಿರಿಯ ವಿದ್ವಾಂಸರಾದ ಶ್ರೀ ಡಾ.ಬಿ.ಗೋಪಾಲಾಚಾರ್ಯ ಹಾಗೂ ಶ್ರೀ ವೇದವ್ಯಾಸ ಪುರಾಣಿಕ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. S S L C, ಹಾಗೂ P U C ಯಲ್ಲಿ ಉತ್ತಮ ಸಾಧನೆ ಮಾಡಿದ ವಲಯದ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ವಲಯದ 9 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಸದಸ್ಯರಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯದರ್ಶಿ ಶ್ರೀ ಸದಾನಂದ ಶರ್ಮ ವರದಿ ವಾಚಿಸಿದರು. ಕೋಶಾಧಿಕಾರಿ ಶ್ರೀ ಶ್ರೀನಿವಾಸ ಭಟ್ ಲೆಕ್ಕ ಪತ್ರ ಮಂಡಿಸಿದರು.ಶ್ರೀ ವ್ಯಾಸರಾಜ ಭಟ್ ವಂದಿಸಿದರು. ಶ್ರೀ ನಾಗರಾಜ ತಂತ್ರಿ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ ತೆಂಕಿಲ್ಲಾಯ, ಬಾಲಕೃಷ್ಣ ಆಚಾರ್ಯ, ರಾಜೇಶ್ ಭಟ್, ರಾಘವೇಂದ್ರ ರಾವ್ ಅವರ ಸಹಕಾರದಿಂದ ನಡೆದ ಕಾರ್ಯಕ್ರಮ ದ ಕೊನೆಯಲ್ಲಿ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *