Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಯೋಗಾಸನ ಸ್ಪರ್ಧೆ: ಹೆಸಕುತ್ತೂರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

ಕೋಟ: ಶ್ರೀ ಆನೆಗುಡ್ಡೆ ವಿನಾಯಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂಭಾಶಿ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿನ ವಿದ್ಯಾರ್ಥಿಗಳು ವಿಶೇಷ ಸಾಧನೆಗೈದಿದ್ದಾರೆ.

7ನೇ ತರಗತಿಯ ಬ್ರಾಹ್ಮಿ ಬಾಲಕಿಯರ ವಿಭಾಗದ ಅಥ್ಲೆಟಿಕ್ ಯೋಗದಲ್ಲಿ ಪ್ರಥಮ, 7ನೇ ತರಗತಿಯ ಸುಜನ್ ಬಾಲಕರ ವಿಭಾಗದಲ್ಲಿ ದ್ವಿತೀಯ, 6ನೇ ತರಗತಿಯ ಸುಚೇಂದ್ರ ಚತುರ್ಥ ಸ್ಥಾನ, ಬಾಲಕಿಯರ ವಿಭಾಗದಲ್ಲಿ 6ನೇ ತರಗತಿಯ ಮಾನ್ಯ ತೃತೀಯ, ಹಂಸಿ ಚತುರ್ಥ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾಗವಹಿಸಿದ ಹಾಗೂ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ, ಹಾಗೂ ವಿದ್ಯಾರ್ಥಿಗಳ ವತಿಯಿಂದ ಅಭಿನಂದಿಸಲಾಯಿತು.

ಶ್ರೀ ಆನೆಗುಡ್ಡೆ ವಿನಾಯಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂಭಾಶಿ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿನ ವಿದ್ಯಾರ್ಥಿಗಳು ವಿಶೇಷ ಸಾಧನೆಗೈದಿದ್ದಾರೆ.

Leave a Reply

Your email address will not be published. Required fields are marked *