• Mon. May 6th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ತೆಕ್ಕಟ್ಟೆ – ಸೇವಾ ಸಂಗಮ ವಿದ್ಯಾ ಕೇಂದ್ರ ಸ್ವಾತಂತ್ರ್ಯ ದಿನಾಚರಣೆ

ByKiran Poojary

Aug 15, 2023

ಕೋಟ: ಸೇವಾ ಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ತೆಕ್ಕಟ್ಟೆ ಉದ್ಯಮಿ ಅನಂತ್ ನಾಯಕ್ ಧ್ವಜಾರೋಹಣ ಗೈದರು. ಸ್ವಾತಂತ್ರ್ಯ ಹೋರಾಟಗಾರರಾದ ಮದನ್ ಲಾಲ್ ಧಿಂಗ್ರ ಇವರ ಕಥೆಯನ್ನು ಮಕ್ಕಳಿಗೆ ಹೇಳುವುದರ ಮೂಲಕ ಮಕ್ಕಳಲ್ಲಿ ದೇಶ ಪ್ರೇಮವನ್ನು ತುಂಬಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಕೋಶಾಧಿಕಾರಿಯಾದ ಚಂದ್ರಶೇಖರ್ ಪಡಿಯಾರ್ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಟಿ. ವಿಷ್ಣುಮೂರ್ತಿ ಭಟ್ ಇವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಎಲ್ಲಾ ವಿದ್ಯಾರ್ಥಿಗಳು ಸಾಮೂಹಿಕ ದೇಶಭಕ್ತಿ ಗೀತೆಯನ್ನು ಹಾಡಿದರು. ವಿದ್ಯಾರ್ಥಿಗಳಾದ ನಿಹಾರಿಕ ಕಾರ್ಯಕ್ರಮವನ್ನು ನಿರೂಪಿಸಿದಳು, ಅಥರ್ವ ಭಟ್ ಸ್ವಾಗತಿಸಿದರು ಹಾಗೂ ರಾಶಿ ವಂದಿಸಿದರು.

ಸೇವಾ ಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ತೆಕ್ಕಟ್ಟೆ ಉದ್ಯಮಿ ಅನಂತ್ ನಾಯಕ್ ಧ್ವಜಾರೋಹಣ ಗೈದರು.

Leave a Reply

Your email address will not be published. Required fields are marked *