ಕೋಟ: ಭಾರತ ಇಂದು ವಿಶ್ವಗುರು ಸ್ಥಾನದಲ್ಲಿ ಗುರುತಿಸಿಕೊಂಡಿದೆ ಇದು ನಾವೆಲ್ಲರೂ ಹೆಮ್ಮೆ ಪಡುವ ವಿಚಾರವಾಗಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಕೋಟತಟ್ಟು ಗ್ರಾಮಪಂಚಾಯತ್ನಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೆರಿಸಿ ಮಾತನಾಡಿ ದೇಶ ಇಂದು ಎಲ್ಲಾ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿದೆ ,ದೇಶದ ಸಾಕ್ಷರತೆ ಸ್ವಾತಂತ್ರ್ಯ ಪೂರ್ವದಲ್ಲಿ ಇದ್ದ 60 ರಷ್ಟಿದ್ದು ಇದೀಗ ಶೇ. 90ರಷ್ಟು ಹೊಂದಿದೆ.ಭಾರತ ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರಹೊಮ್ಮಿದೆ,ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ವೀರ ಕ್ರಾಂತಿಕಾರಿಗಳನ್ನು , ಯೋಧರನ್ನು ಸ್ಮರಿಸಿದರು.
ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿ, ಇಬ್ರಾಹಿಂ ಸಾಹೇಬ್, ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಕಾರ್ಯದರ್ಶಿ ಸುಮತಿ ಅಂಚನ್, ಸದಸ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ನಿರ್ವಹಿಸಿದರು.
ಕೋಟತಟ್ಟು ಗ್ರಾಮಪಂಚಾಯತ್ನಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೆರವೆರಿಸಿದರು.