Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಸ್ತಾನ- ಶ್ರೀ ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ

ಕೋಟ: ಶ್ರೀ ಕ್ಷೇತ್ರ ಬ್ರಹ್ಮಬೈದರ್ಕಳ ಗೋಳಿಗರಡಿ ಸಾಸ್ತಾನ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಮತ್ತು ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಮಿತಿ ಮಹಿಳಾ ಘಟಕದ ಆಶ್ರಯದಲ್ಲಿ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಜರಗಿತು.

ವೇ.ಮೂ.ಸುಬ್ರಹ್ಮಣ್ಯ ಹೊಳ್ಳ ಪಾಂಡೇಶ್ವರ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೆರಿತು. ಶ್ರೀ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಮಿತಿ ಮಹಿಳಾ ಘಟಕದ ವತಿಂದ ಭಜನಾ ಕಾರ್ಯಕ್ರಮ ಸಂಪನ್ನಗೊಂಡಿತು. ನೂರಾರು ಮಹಿಳಾ ಭಕ್ತಾಧಿಗಳು ಲಕ್ಷ್ಮೀ ಪೂಜಾ ವಿಶೇಷ ವಿಧಿವಿಧಾನಗಳಲ್ಲಿ ಭಾಗಿಯಾದರು. ನಂತರ ಮಹಾಅನ್ನಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೋಳಿಗರಡಿಯ ಮುಕ್ತೇಸರ ಜಿ.ವಿಠ್ಠಲ ಪೂಜಾರಿ ಪಾಂಡೇಶ್ವರ,ಶ್ರೀ ಗರಡಿಯ ಪಾತ್ರಿ ಶಂಕರ ಪೂಜಾರಿ,ಗುರಿಕಾರರಾದ ಬಸವ ಪೂಜಾರಿ,ಶ್ರೀ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಅಧ್ಯಕ್ಷ ಎಂ.ಸಿ ಚಂದ್ರಶೇಖರ ,ಪ್ರದಾನಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ ,ಗ್ರಾಮ ಸಮಿತಿ ಅಧ್ಯಕ್ಷರಾದ ಸುರೇಶ್ ಪೂಜಾರಿ,ರಾಜು ಪೂಜಾರಿ ಪಾಂಡೇಶ್ವರ, ಮಹಿಳಾ ಘಟಕ ಅಧ್ಯಕ್ಷೆ ರತ್ನಾ ಜೆ ರಾಜ್, ಕಾರ್ಯದರ್ಶಿ ಲೀಲಾವತಿ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಬ್ರಹ್ಮಬೈದರ್ಕಳ ಗೋಳಿಗರಡಿ ಸಾಸ್ತಾನ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಮತ್ತು ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಮಿತಿ ಮಹಿಳಾ ಘಟಕದ ಆಶ್ರಯದಲ್ಲಿ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಜರಗಿತು.

Leave a Reply

Your email address will not be published. Required fields are marked *