Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಬಿಲ್ಲವರ ಸೇವಾ ಸಂಘ ಉಡುಪಿ ರಿ. ಬನ್ನಂಜೆ ಇದರ ಸಹಕಾರದೊಂದಿಗೆ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ವಹಿಸಿ ಬ್ರಹ್ಮಶ್ರೀ ನಾರಾಯಣಗುರುಗಳ ಜೀವನ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಂಸ್ಕಾರಯುತ ಸಮಾಜ ಕಟ್ಟೋಣ ಎಂದು ಆಶಯ ವ್ಯಕ್ತಪಡಿಸಿದರು.

ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಸಮಾರಂಭದಲ್ಲಿ ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಅಪರ ಜಿಲ್ಲಾಧಿಕಾರಿಗಳಾದ ಮಮತ ದೇವಿ ಜಿ. ಎಸ್., ನಗರ ಸಭೆ ಮಾಜಿ ಅಧ್ಯಕ್ಷರಾದ ಕಿರಣ್ ಬೈಲೂರು, ನಗರ ಸಭಾ ಸದಸ್ಯರುಗಳಾದ ಸವಿತಾ ಹರೀಶ್ ರಾಮ್, ವಿಜಯ ಕೊಡವೂರು, ಗಿರೀಶ್ ಅಂಚನ್, ಸಂತೋಷ್ ಜತ್ತನ್, ಎಡ್ಲಿನ್ ಕರ್ಕಡ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಮಾಧವ ಪೂಜಾರಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *