
ಕೋಟ: ಗ್ರಾಮೀಣ ಭಾಗದ, ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕೌಶಲಗಳ ಕಲಿಕೆಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಸಮಾಜ ಸೇವಾ ಫೌಂಡೇಶನ್ನ ಆದ್ಯತೆಯಾಗಿದೆ, ಎಂದು ಗೀತಾನಂದ ಫೌಂಡೇಶನ್ನ ಪ್ರವರ್ತಕರಾದ ಆನಂದ ಸಿ ಕುಂದರ್ ಅಭಿಪ್ರಾಯ ಪಟ್ಟರು.
ಸರಕಾರಿ ಪದವಿಪೂರ್ವ ಕಾಲೇಜು ಮಣೂರು ಪಡುಕರೆಯ ವಿದ್ಯಾರ್ಥಿಗಳಿಗೆ ಆಯೋಜಿಸಿದ ಉಚಿತ ಕಂಪ್ಯೂಟರ್ ತರಗತಿ ಮತ್ತು ಆನ್ಲೈನ್ ಸಿಇಟಿ ತರಗತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಗೀತಾನಂದ ಫೌಂಡೇಶನ್ನ ವತಿಯಿಂದ ನೀಡಿದ ಗುರುತು ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅವರು ವಿತರಿಸಿದರು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆಯ ಪ್ರಾಂಶುಪಾಲರಾದ ಡಾ. ಸುನೀತಾ, ಪ್ರಾಧ್ಯಾಪಕರಾದ ಶಂಕರ್ ನಾಯ್ಕ್, ಕಾಲೇಜು ಶೈಕ್ಷಣಿಕ ಸಮಿತಿಯ ಸದಸ್ಯರಾದ ಜಯರಾಮ ಶೆಟ್ಟಿ, ಗೀತಾನಂದ ಫೌಂಡೇಶನ್ನ ಸಮಾಜ ಕಾರ್ಯ ವಿಭಾಗದ ಸಂಯೋಜಕ ರವಿಕಿರಣ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಾಂಶುಪಾಲ ಡೆನಿಸ್ ಬಾಂಜಿ ಸ್ವಾಗತಿಸಿ, ಉಪನ್ಯಾಸಕ ಸತ್ಯನಾರಾಯಣ ಕಾರ್ಯಕ್ರಮ ನಿರ್ವಹಿಸಿದರು.
ಸರಕಾರಿ ಪದವಿಪೂರ್ವ ಕಾಲೇಜು ಮಣೂರು ಪಡುಕರೆಯ ವಿದ್ಯಾರ್ಥಿಗಳಿಗೆ ಆಯೋಜಿಸಿದ ಉಚಿತ ಕಂಪ್ಯೂಟರ್ ತರಗತಿ ಮತ್ತು ಆನ್ಲೈನ್ ಸಿಇಟಿ ತರಗತಿಗಳನ್ನು ಗೀತಾನಂದ ಫೌಂಡೇಶನ್ನ ಪ್ರವರ್ತಕರಾದ ಆನಂದ ಸಿ ಕುಂದರ್ ಉದ್ಘಾಟಿಸಿದರು.













Leave a Reply