ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಎಸ್ ಮಧು ಬಂಗಾರಪ್ಪ ರವರ ನೇತೃತ್ವದಲ್ಲಿ. ಕರ್ನಾಟಕ ರಾಜ್ಯ ಸರ್ಕಾರದ ಗೌರವಾನ್ವಿತ ಮುಖ್ಯ ಮಂತ್ರಿಗಳಾದ ಮಾನ್ಯ ಶ್ರೀ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿ ಈಡಿಗ ಸಮುದಾಯದ ಅಭಿವೃದ್ಧಿಗೆ ನಿಗಮ ಮಂಡಳಿಗೆ ಹಣ ಬಿಡುಗಡೆ ಮಾಡುವಂತೆ ಹಾಗೂ ರಾಜ್ಯದಲ್ಲಿ ಈಡಿಗ ಸಮುದಾಯದ ಬೃಹತ್ ಸಮಾವೇಶ ಮಾಡಲು ಹಾಗೂ ಸಮಾಜದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಆರ್ಯ ಈಡಿಗ ಸಮಾಜದ ಯೋಗೇಂದ್ರ ಅವಧೂತ ಶ್ರೀಗಳು. ಡಾ.ಶ್ರೀ ರಾಮಪ್ಪ ನವರು ಧರ್ಮದರ್ಶಿಗಳು ಶ್ರೀ ಕ್ಷೇತ್ರ ಸಿಗಂದೂರು.ಶಿರಸಿ -ಸಿದ್ದಾಪುರ ಕ್ಷೇತ್ರದ ಶಾಸಕರಾದ ಶ್ರೀ ಭೀಮಣ್ಣ ನಾಯ್ಕ ರವರು.ಕರ್ನಾಟಕ ರಾಜ್ಯ ಆರ್ಯ ಈಡಿಗ ಸಂಘದ ರಾಜ್ಯ ಅಧ್ಯಕ್ಷರಾದ ಡಾ. ಶ್ರೀ ಎಂ.ತಿಮ್ಮೆಗೌಡ ರವರು.ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ವೇದಕುಮಾರ್. ವಕೀಲರಾದ ಧರ್ಮರಾಜ್ ಅವರು SNGV ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಘವೇಂದ್ರ ನಾಯ್ಕ ಸುಂಟರಹಳ್ಳಿ. ರಾಜ್ಯ ಖಜಾಂಚಿ ಶ್ರೀ ದಿನೇಶ್ ಮಳಲಗದ್ದೆ. SNGV ರಾಜ್ಯ ಕಾರ್ಯಾಧ್ಯಕ್ಷ ಶ್ರೀ ಮುಡುಬ ರಾಘವೇಂದ್ರ. ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ದತ್ತಾತ್ರೇಯ ಬಿದರಗೇರಿ. ರಾಜ್ಯ ಕಾನೂನು ಸಲಹಾ ಸಮಿತಿ ಸದಸ್ಯರಾದ ಶ್ರೀ ಕುಮಾರಸ್ವಾಮಿ ಸೇರಿ ಸಮಾಜದ ಮುಖಂಡರುಗಳು ಭಾಗಿಯಾಗಿದ್ದರು