Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹಂಗಾರಕಟ್ಟೆ- ಚೇತನ ಪ್ರೌಢಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ

ಕೋಟ: ದೇಶದ ಪಿತಾಮಹಾ ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಚೇತನ ಪ್ರೌಢಶಾಲೆ ಹಂಗಾರಕಟ್ಟೆ ಇಲ್ಲಿ ವಿಶೇಷವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತು. ಇದೇ ವೇಳೆ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿದ್ದು ಬಹುಮಾನವನ್ನು ವಿತರಿಸಲಾಯಿತು. ಹಂಗಾರಕಟ್ಟೆ_ ಸಾಸ್ತಾನ ರೋಟರಿ ಕ್ಲಬ್‍ನ ಅಧ್ಯಕ್ಷ ಅರವಿಂದ್ ಶರ್ಮ, ಕಾರ್ಯದರ್ಶಿ ಕರುಣಾಕರ ಶೆಟ್ಟಿ ,ನಿಕಟ ಪೂರ್ವ ಅಧ್ಯಕ್ಷ ಮನೋಜ್ ಕುಮಾರ್ ಹಾಗೂ ಕೇಶವ ಗಾಣಿಗ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಶ್ರಮದಾನ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಹಾಗೂ ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಶ್ರಮದಾನದಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *