• Tue. May 7th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ByKiran Poojary

Oct 23, 2023

ಛತ್ತೀಸ್‍ಗಢದ ವಿಧಾನಸಭಾ ಚುನಾವಣೆಗೂ ಮುನ್ನ ಬಂಡಾಯ ಪೀಡಿತ ಮೊಹ್ಲಾ-ಮಾನ್‍ಪುರ್-ಅಂಬಗಢ ಚೌಕಿ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಹತ್ಯೆಗೀಡಾದ ಬಿಜೆಪಿ ಮುಖಂಡ ಬಿರ್ಜು ತಾರಾಮ್ (53), ಪಕ್ಷದ ರೈತ ವಿಭಾಗದ ಉಪಾಧ್ಯಕ್ಷರಾಗಿದ್ದರು.

ಇನ್ನು ಈ ಹಿಂದೆ ಮನ್‍ಪುರ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕೊಲೆಯಲ್ಲಿ ಮಾವೋವಾದಿಗಳು ಹಾಗೂ ಸ್ಥಳೀಯ ಗಲಭೆಕೋರರು ಭಾಗಿಯಾಗಿರಬಹುದು ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *