• Sun. May 12th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ನೇಜಾರು: ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಶಂಕಿತ ಆರೋಪಿ ಬೆಳಗಾವಿಯಲ್ಲಿ ಬಂಧನ

ByKiran Poojary

Nov 14, 2023

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿಯಲ್ಲಿ ಕೊಲೆ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೇ (35) ಬಂಧಿತ ಆರೋಪಿ. CRPF ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ, ಮಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡುತ್ತಿದ್ದ.

ಶಂಕಿತ ಆರೋಪಿ ಪ್ರವೀಣ ಚೌಗಲೇ ಉಡುಪಿಯ ಮನೆಯೊಂದಕ್ಕೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಕೇವಲ 10 ನಿಮಿಷದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ. ಈತನ ಬೆನ್ನು ಬಿದ್ದಿದ್ದ ಪೊಲೀಸರು ಇಂದು ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದ ವೇಳೆ ಬಂಧಿಸಿದ್ದಾರೆ. ಆತನ ಟೆಕ್ನಿಕಲ್ ಎವಿಡನ್ಸ್ ಆಧರಿಸಿ ಖೆಡ್ಡಾಕ್ಕೆ ಕೆಡವಿದ್ದಾರೆ. ಕೊಲೆ ಮಾಡಿ ಊರೂರು ಸುತ್ತಿ ಸಿಕ್ಕಿಬಿದ್ದ ಶಂಕಿತ ಆರೋಪಿಯನ್ನು ಬಂಧಿಸಿ ಉಡುಪಿಗೆ ಕರೆತರಲಾಗುತ್ತಿದೆ ಎನ್ನುವ ಮಾಹಿತಿ ಲಭಿಸಿದೆ.

Leave a Reply

Your email address will not be published. Required fields are marked *