
ಕೋಟ: ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸAಸ್ಥೆಯಿAದ ಶ್ರೀ ಗುರುನರಸಿಂಹ ಬಿಲಿಯನ್ ಫೌಂಡೇಶನ್ನ ಶೈಕ್ಷಣಿಕ ವಿಧ್ಯಾರ್ಥಿ ಪ್ರೋತ್ಸಾಹಧನ ವಿತರಣೆ , ವೃತ್ತಿಮಾರ್ಗದರ್ಶನ ಶಿಬಿರ ಹಾಗೂ ಸನ್ಮಾನ ಸಮಾರಂಭ ಶ್ರೀ ಗುರುನರಸಿಂಹ ದೇವಸ್ಥಾನದ ಕೂಟಬಂಧು ಭವನದಲ್ಲಿ ಭಾನುವಾರ ಜರಗಿತು.
ಕೂಟಮಹಾಜಗತ್ತು ಸಾಲಿಗ್ರಾಮ ಅಂಗಸAಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಾಲಿಗ್ರಾಮ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ. ಎಸ್. ಕಾರಂತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಮಾಜದ ಅಭಿವೃದ್ಧಿಗಾಗಿ ಇಂತಹ ಕಾರ್ಯಕ್ರಮ ನಡೆಯಬೇಕು, ಪಡೆದ ಕೈಗಳು ಕೊಡವ ಕೈಗಳಾಗಬೇಕೆಂದು ಹಾರೈಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಸುರೇಶ ತುಂಗ ಭವಿಷ್ಯದಲ್ಲಿ ವೃತ್ತಿಪರ ಶಿಕ್ಷಣದಲ್ಲಿ ಹೇಗೆ ಮುಂದುವರಿಯಬಹುದು ಎನ್ನುವುದರ ಬಗ್ಗೆ ಮಾರ್ಮಿಕವಾಗಿ ನುಡಿದರು. ಸುಮಾರು 60 ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಯಿತು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕöÈತರಾದ ಕೃಷ್ಣಮೂರ್ತಿ ಉರಾಳರನ್ನು
ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಬಿಲಿಯನ್ ಫೌಂಡೇಶನ್ ಅಧ್ಯಕ್ಷರಾದ ಆನಂದರಾಮ ಮಧ್ಯಸ್ಥ ,ಬಿಲಿಯನ್ ಫೌಂಡೇಶನ್ನ ಪ್ರತಿನಿಧಿ ಪ್ರಭಾಕರ ಮೈಯ, ಉಪಸ್ಥಿತರಿದ್ದರು. ಮಂಜುನಾಥ ಉಪಾಧ್ಯ ಮತ್ತು ಚಿದಾನಂದ ತುಂಗ ಕಾರ್ಯಕ್ರಮ ನಿರ್ವಹಿಸಿದರು.
ಅಂಗಸAಸ್ಥೆಯ ಕಾರ್ಯದರ್ಶಿ ಮಹಾಬಲ ಹೇರ್ಳೆ ವಂದಿಸಿದರು.
ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸAಸ್ಥೆಯಿAದ ಶ್ರೀ ಗುರುನರಸಿಂಹ ಬಿಲಿಯನ್ ಫೌಂಡೇಶನ್ನ ಶೈಕ್ಷಣಿಕ ವಿಧ್ಯಾರ್ಥಿ ಪ್ರೋತ್ಸಾಹಧನ ವಿತರಣೆ , ವೃತ್ತಿಮಾರ್ಗದರ್ಶನ ಶಿಬಿರ ಹಾಗೂ ಸನ್ಮಾನ ಸಮಾರಂಭ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕöÈತರಾದ ಕೃಷ್ಣಮೂರ್ತಿ ಉರಾಳರನ್ನು ಸನ್ಮಾನಿಸಲಾಯಿತು. ಕೂಟಮಹಾಜಗತ್ತು ಸಾಲಿಗ್ರಾಮ ಅಂಗಸAಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿ, ಸಾಲಿಗ್ರಾಮ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ. ಎಸ್. ಕಾರಂತರು ಮತ್ತಿತರರು ಇದ್ದರು.
Leave a Reply