ಕೋಟ: ಕಳೆದ ಐದು ದಶಕಗಳಿಂದ ಯಕ್ಷಗಾನ ಕ್ಷೇತ್ರಕ್ಕೆ ಸಾವಿರಕ್ಕೂ ಮಿಕ್ಕಿ ಕಲಾವಿದರನ್ನು ನೀಡಿರುವ ಇದೀಗ ಐವತ್ತರ ಸಂಭ್ರಮವನ್ನು ಆಚರಿಸುತ್ತಿರುವ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿಯು ಸಾಲಿಗ್ರಾಮದ ಗುಂಡ್ಮಿಯಲ್ಲಿರುವ ಕಲಾಕೇಂದ್ರದ ಸದಾನಂದ ರಂಗ ಮಂಟಪದಲ್ಲಿ ಜನವರಿ ಒಂದರಿAದ ಏಳ ರ ತನಕ ಯಕ್ಷಗಾನ ಸಪ್ತಾಹವನ್ನು ಹಮ್ಮಿಕೊಂಡಿದೆ.
ರಾಮಾಯಣದಲ್ಲಿ ಧರ್ಮಸೂಕ್ಷಗಳು ಎಂಬ ಶೀರ್ಷಿಕೆಯಲ್ಲಿ ಏಳೂ ದಿನಗಳು ರಾಮಾಯಣದ ವಿವಿದ ಪ್ರಸಂಗಗಳನ್ನು ಪ್ರದರ್ಶಿಸಲಾಗುವುದು. ಕೊಂಡದಕುಳಿ ರಾಮಚಂದ್ರ ಹೆಗಡೆ ರಂಗ ನಿರ್ದೇಶನದಲ್ಲಿ ನಡೆಯುವ ಈ ಸಪ್ತಹವನ್ನು ಯಕ್ಷಗಾನ ಪ್ರೋತ್ಸಾºಕ , ರಂಗಭೂಮಿ ಉಡುಪಿಯ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟರು ಉದ್ಗಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾರವರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆಂದು ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ ತಿಳಿಸಿರುತ್ತಾರೆ.