
ಕೋಟ: ಇಲ್ಲಿನ ಸಾಲಿಗ್ರಾಮ ಪಾರಂಪಳ್ಳಿಯ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರತಿವರ್ಷ ಅಶಕ್ತರ ನೆರವಿಗಾಗಿ ಏರ್ಪಡಿಸುವ ಯಕ್ಷಗಾನ ಕಾರ್ಯಕ್ರಮದ ವೇದಿಕೆಯಲ್ಲಿ ವಿನ್ಲೈಟ್ ಸ್ಪೋರ್ಟ್್ಸ ಕ್ಲಬ್ ಪುರಸ್ಕಾರ ನೀಡುತ್ತಾ ಬಂದಿದ್ದು ಈ ಬಾರಿ ವೈದ್ಯಕೀಯ ಕ್ಷೇತ್ರ ಸಾಧಕ ಶಕ್ತಿಗಳಾದ ಬೆಂಗಳೂರಿನ ಶೇಖರ್ ಆಸ್ಪತ್ರೆ ಮುಖ್ಯಸ್ಥ ಡಾ.ವಿಷ್ಣುಮೂರ್ತಿ ಐತಾಳ್,ಹಾಗೂ ಕೆ.ಎಂ.ಸಿ ಮಂಗಳೂರು ಇಲ್ಲಿನ ಮುಖ್ಯ ವೈದ್ಯ ಡಾ.ಮಧುಸೂದನ್ ಉಪಾಧ್ಯಾ , ಲಿಮ್ಕಾ ದಾಖಲೆಯ ಸರದಾರ ಈಜುಪಟು ಗೋಪಾಲ್ ಕಾರ್ವಿ ಇವರುಗಳಿಗೆ ಪಾರಂಪಳ್ಳಿ ಗುಡ್ಡಿ ಶಾಲೆ ಸನಿಹದಲ್ಲಿ ಡಿ.23ರಂದು ನಡೆಯುವ ವೇದಿಕೆಯಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಿದೆ. ಅಲ್ಲದೆ ಅದೇ ವೇದಿಕೆಯಲ್ಲಿ ಕೆಲವು ಅಶಕ್ತ,ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಕಾರ್ಯಗಳನ್ನು ಹಮ್ಮಿಕೊಂಡಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Reply