News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ವಿವೇಕ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

ಕೋಟ: ಕೋಟ ವಿವೇಕ ಪದವಿ ಪೂರ್ವ ಕಾಲೇಜು ಇದರ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ 1.50 ಲಕ್ಷ ರೂಪಾಯಿಯ ಮಂಜೂರಾತಿ ಪತ್ರವನ್ನು ಕಾಲೇಜು ಪ್ರಾಂಶುಪಾಲ ಕೆ.ಜಗದೀಶ್ ನಾವಡ ಇವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿವೇಕ ವಿದ್ಯಾ ಸಂಘದ ಕೋಶಾಧಿಕಾರಿ ವೆಲೇರಿಯನ್ ಮೆನೆಜಸ್,ಜತೆಕಾರ್ಯದರ್ಶಿ ಮಂಜುನಾಥ್ ಉಪಾಧ್ಯ, ವಸಂತ ಶೆಟ್ಟಿ, ಬ್ರಹ್ಮಾವರ ತಾಲ್ಲೂಕು ಯೋಜನಾಧಿಕಾರಿ ರಮೇಶ್ ಪಿ ಕೆ, ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಪ್ರದೀಪ್ ಜೈನ್,ಜನಜಾಗ್ರತಿ ಮಾಜಿ ಅಧ್ಯಕ್ಷ ಅಚ್ಯುತ್ ಪೂಜಾರಿ, ಜನಜಾಗೃತಿ ಸದಸ್ಯ ಪ್ರತಾಪ್ ಶೆಟ್ಟಿ, ಕೋಟ ವಲಯ ಮೇಲ್ವಿಚಾರಕಿ ನೇತ್ರಾವತಿ, ಪಾರಂಪಳ್ಳಿ ಒಕ್ಕೂಟದ ಅಧ್ಯಕ್ಷೆ ಸವಿತಾ, ಸೇವಾ ಪ್ರತಿನಿಧಿ ಶ್ಯಾಮಲಾ ಉಪಸ್ಥಿತರಿದ್ದರು.

ಕೋಟ ವಿವೇಕ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ 1.50 ಲಕ್ಷ ರೂಪಾಯಿಯ ಮಂಜೂರಾತಿ ಪತ್ರವನ್ನು ಕಾಲೇಜು ಪ್ರಾಂಶುಪಾಲ ಕೆ.ಜಗದೀಶ್ ನಾವಡ ಇವರಿಗೆ ಹಸ್ತಾಂತರಿಸಲಾಯಿತು. ವಿವೇಕ ವಿದ್ಯಾ ಸಂಘದ ಕೋಶಾಧಿಕಾರಿ ವೆಲೇರಿಯನ್ ಮೆನೆಜಸ್, ಜತೆಕಾರ್ಯದರ್ಶಿ ಮಂಜುನಾಥ್ ಉಪಾಧ್ಯ, ವಸಂತ ಶೆಟ್ಟಿ, ಬ್ರಹ್ಮಾವರ ತಾಲ್ಲೂಕು ಯೋಜನಾಧಿಕಾರಿ ರಮೇಶ್ ಪಿ ಕೆ, ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಪ್ರದೀಪ್ ಜೈನ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *