ಕೋಟ: ಸೌಜನ್ಯ ಹೋರಾಟ ಸಮಿತಿ ಕೋಟ ಇವರ ವತಿಯಿಂದ ಧರ್ಮಸ್ಥಳದಲ್ಲಿ ಅತ್ಯಾಚಾರವಾಗಿ ಕೊಲೆಯಾದ ಕುಮಾರಿ ಸೌಜನ್ಯಳಿಗೆ ನ್ಯಾಯ ಕೋರಿ ಮರುತನಿಖೆಯನ್ನು ನ್ಯಾಯಾಂಗ ಸುಪರ್ದಿಯಲ್ಲಿ ಮಾಡಬೇಕೆಂದು ಆಗ್ರಹಿಸಿ ಡಿ.24ರ ಭಾನುವಾರ ಸಂಜೆ 4 ಗಂಟೆಗೆ ಸರಿಯಾಗಿ ಹಿರೇಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಕೋಟ ಇಲ್ಲಿ ಬೃಹತ್ ಜನಾಂದೋಲನ ಸಭೆ ನಡೆಯಲಿರುವುದು.
ಈ ಸಭೆಗೆ ಸೌಜನ್ಯ ಹೋರಾಟದ ರೂವಾರಿ ಮಹೇಶ್ ಶೆಟ್ಟಿ ತಿಮರೋಡಿ, ಮಾಜಿ ಪೊಲೀಸ ಅಧಿಕಾರಿ ಗಿರೀಶ್ ಮಟ್ಟಣ್ಣನವರ್, ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ, ದೈವ ಚಿಂತಕರಾದ ತಮ್ಮಣ್ಣ ಶೆಟ್ಟಿ, ಸೌಜನ್ಯ ತಾಯಿ ಕುಸುಮಾವತಿ , ನ್ಯಾಯವಾದಿ ಮೋಹಿತ್ ಕುಮಾರ್, ಮಾನವ ಹಕ್ಕು ಹೋರಾಟಗಾರ ದಿನೇಶ್ ಗಾಣಿಗ ಭಾಗವಹಿಸಲಿದ್ದಾರೆ ಎಂದು ಹೋರಾಟ ಸಮಿತಿ ತಿಳಿಸಿದೆ.