• Sun. May 19th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ByKiran Poojary

Jan 16, 2024


ಕೋಟ: ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಪಾರಂಪಳ್ಳಿ ಶ್ರೀ ಮಹಾ ವಿಷ್ಣು ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು. ಸಭೆಯಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನವನ್ನು ಫೆ.13ರ ಮಂಗಳವಾರ ನಡೆಸಲು ತೀರ್ಮಾನಿಸಲಾಯಿತು.
ಶ್ರೀ ಮಹಾವಿಷ್ಣು ಸಭಾಂಗಣದಲ್ಲಿ ನಡೆಸಲು ಉದ್ದೇಶಿಸಲಾದ ಈ ಸಮ್ಮೇಳನದ ಗೌರವಾಧ್ಯಕ್ಷರಾಗಿ ಶಾಸಕ ಕಿರಣ್ ಕೊಡ್ಗಿ ಮತ್ತು ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಉಪಾಧ್ಯ ಆಯ್ಕೆಗೊಳಿಸಿ ತಿರ್ಮಾನಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪರಿಷತ್ತಿನ ಅಧ್ಯಕ್ಷರಾದ ಜಿ.ರಾಮಚಂದ್ರ ಐತಾಳ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಕೋರಿದರು. ಜಿಲ್ಲಾ ಅಧ್ಯಕ್ಷ ಸುರೇಂದ್ರ ಅಡಿಗ ಸಮ್ಮೇಳನದ ಕುರಿತು ತನ್ನ ಅನಿಸಿಕೆಗಳನ್ನು ಸಭೆಯ ಮುಂದಿಟ್ಟರು. ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳಾದ ನರೇಂದ್ರ ಕುಮಾರ್ ಕೋಟ, ನರಸಿಂಹಮೂರ್ತಿ ,ಸತೀಶ್ ವಡ್ದರ್ಸೆ, ಅಚ್ಯುತ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಉಡುಪಿ ತಾಲೂಕು ಘಟಕದ ಪೂರ್ವಾಧ್ಯಕ್ಷ ಪ್ರೊಫೆಸರ್ ಉಪೇಂದ್ರ ಸೋಮಯಾಜಿ ಮಾರ್ಗದರ್ಶನದ ನುಡಿಗಳನ್ನಾಡಿದರು.

ಸಭೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಇವುಗಳಿಗೆ ಹೊಸ ಸದಸ್ಯರನ್ನು ಸೇರಿಸಲು, ಸಮ್ಮೇಳನದ ಅಧ್ಯಕ್ಷರ ಆಯ್ಕೆ ಹಾಗೂ ರೂಪುರೇಷೆಗಳನ್ನು ಜಿಲ್ಲಾ ಸಮಿತಿಯ ಸಹಕಾರದೊಂದಿಗೆ ಕೈಗೊಳ್ಳುವಂತೆ ತಾಲೂಕು ಘಟಕದ ಪದಾಧಿಕಾರಿಗಳಿಗೆ ಅಧಿಕಾರ ನೀಡಲಾಯಿತು.
ತಾಲೂಕು ಘಟಕದ ಕಾರ್ಯದರ್ಶಿ ಪಕೀರಪ್ಪ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಜ್ಯೋತಿ ವಂದಿಸಿದರು.

ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಪಾರಂಪಳ್ಳಿ ಶ್ರೀ ಮಹಾ ವಿಷ್ಣು ಸಭಾಂಗಣದಲ್ಲಿ ತಾಲೂಕು ಕ.ಸಾ.ಪ ಅಧ್ಯಕ್ಷ ಜಿ.ರಾಮಚಂದ್ರ ಐತಾಳ್ ಅಧ್ಯಕ್ಷತೆಯಲ್ಲಿ ಜರಗಿತು. ತಾಲೂಕು ಘಟಕಗಳ ಪದಾಧಿಕಾರಿಗಳಾದ ನರೇಂದ್ರ ಕುಮಾರ್ ಕೋಟ, ನರಸಿಂಹಮೂರ್ತಿ ,ಸತೀಶ್ ವಡ್ದರ್ಸೆ, ಅಚ್ಯುತ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *