• Mon. May 13th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ರೈತರಿಗೆ ಅನುಕೂಲವಾಗುವಂತೆ ಕೆಲಸ ಮಾಡಿ: ಮುರುಗೇಶ್ ನಿರಾಣಿ

ByKiran Poojary

Feb 29, 2024

ಸಾವಳಗಿ : ಯಾವುದೇ ಕೆಲಸವಿರಲ್ಲಿ ಎಲ್ಲರಿಗೂ ಉಪಯುಕ್ತವಾಗುವಂತೆ ಮಾಡಿ ಎಂದು ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯದ ಬಿಜೆಪಿ ಪಕ್ಷದ ಉಪಾಧ್ಯಕ್ಷರು ಸನ್ಮಾನ್ಯ ಶ್ರೀ ಮುರುಗೇಶ್ ಆರ್ ನಿರಾಣಿ ಹೇಳಿದರು.

ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆಯಲ್ಲಿ ವಿಜಯಶಾಲಿಯಾದ ಲವಾ ಕಲಪ್ಪ ಮಾಳಿ ಅವರಿಗೆ ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯದ ಬಿಜೆಪಿ ಪಕ್ಷದ ಉಪಾಧ್ಯಕ್ಷರು  ಶ್ರೀ ಮುರುಗೇಶ್ ಆರ್ ನಿರಾಣಿ ಅವರು ಸನ್ಮಾನ ಮಾಡಿ ಮಾತನಾಡಿದ ಅವರು ಎಲ್ಲಾ ಸದಸ್ಯರು ರೈತರಿಗೆ ಅನುಕೂಲವಾಗುವಂತೆ ಬೆಳೆ ಸಾಲ, ರಿನ್ವವಲ್, ಎಫ್ ಡಿ, ಓಡಿ ಲೋನ್ ಸೇರಿದಂತೆ ಅನೇಕ ಕೆಲಸಗಳಿಗಾಗಿ ತಮ್ಮ ಪಿಕೆಪಿಎಸಗೆ ಬರುತ್ತಾರೆ ಇದನ್ನು ರೈತರಿಗೆ ಅನುಕೂಲವಾಗುವಂತೆ ಕೆಲಸ ಮಾಡಿ ಹಾಗೂ ಪಿಕೆಪಿಎಸ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಆಯ್ಕೆಯಾಗಿದಕ್ಕೆ ಅಭಿನಂದನೆಗಳು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಹಿರಿಯರು, ಕಾರ್ಯಕರ್ತರು, ಗ್ರಾಂ ಪಂ ಸದಸ್ಯರು, ಪಿಕೆಪಿಎಸ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *