
ಕೋಟ: ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕರೆ ಪಂಚಾಯತ್ ಸದಸ್ಯ ರವೀಂದ್ರ ತಿಂಗಳಾಯ ಉಡುಪಿ ಜಿಲ್ಲಾ ಬಿಜೆಪಿಯಲ್ಲಿ ಜಿಲ್ಲಾ ಒಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು , ಅವರಿಗೆ ಅಭಿನಂದಿಸಿದ ಕುರಿತು ಆ ಪರಿಸರದ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ಬ್ಯಾನರ್ ಅಳವಡಿಸಿದ್ದು ಅದನ್ನು ನಡುರಾತ್ರಿ ಕಿಡಿಗೆಡಿಗಳು ಕಾರಿನ ಮೂಲಕ ಸಂಚರಿಸಿ ಬ್ಯಾನರ್ಗೆ ತಲವಾರ್ ಹಾಗೂ ಇತರೆ ವಸ್ತುಗಳಿಂದ ಹಾನಿಗೆಡವಿದ ಘಟನೆ ಇತ್ತೀಚಿಗೆ ತಡವಾಗಿ ಬೆಳಕಿಗೆ ಬಂದಿದೆ.
ಸುಮಾರು ಮೂರು ಬ್ಯಾನರ್ ಗಳಿಗೆ ಹಾನಿಯುಂಟು ಮಾಡಿದ್ದು , ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ, ಪರಿಸರದ ಎಲ್ಲಾ ಸಿಸಿ ಟಿವಿ ಕ್ಯಾಮೆರಾದಲ್ಲಿ ವಿಡಿಯೋ ಸಿಕ್ಕಿದ್ದು , ಕೋಟ ಠಾಣೆಯಲ್ಲಿ ದೂರು ದಾಖಲಾಗಿದೆ.ಅಲ್ಲದೆ ಈ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
Leave a Reply