Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ವಿಶ್ವರಂಗಭೂಮಿ ದಿನಾಚರಣೆಗೆ ಆನಂದ ಸಿ ಕುಂದರ್ ಚಾಲನೆ
ಸಾಂಸ್ಕೃತಿಕ  ಮನೋಭಾವನೆ ಮಕ್ಕಳಲ್ಲಿ ಮೂಡಿಸಿ

ಕೋಟ :ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸಂಘ ಸಂಸ್ಥೆಗಳು ಮಕ್ಕಳಲ್ಲಿ ಸಾಂಸ್ಕೃತಿಕ ಮನೋಭಾವನೆ ಮೂಡಿಸುವ ಕೆಲಸ ಮಾಡಬೇಕು ಎಂದು ಕೋಟದ ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ ಕುಂದರ್ ಹೇಳಿದರು.

ಕೋಟದ ವಾಸುದೇವ ರಂಗಮಂಟಪದಲ್ಲಿ ಭಾನುವಾರ ಕೋಟ ರಸರಂಗದ ಹದಿನೈದನೇ ವರ್ಷದ ಮತ್ತು ಕೋಟ ಯಕ್ಷ ಮಹಿಳಾ ಬಳಗದ ಹತ್ತನೇ ವರ್ಷದ ಸವಿನೆನಪಿನಲ್ಲಿ ಕನ್ನಡ ಮತ್ತು ಸಾಂಸ್ಕೃತಿಕ  ಇಲಾಖೆಯ ಸಹಯೋಗದೊಂದಿಗೆ ನಡೆದ ವಿಶ್ವರಂಗಭೂಮಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳಲ್ಲಿ ಕಲೆ, ಸಾಹಿತ್ಯದ ಅಭಿರುಚಿಯನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸುವ ಕಾರ್ಯವಾಗಬೇಕು. ಸಂಘ ಸಂಸ್ಥೆಗಳು ಇಂತಹ ಕಾರ್ಯಕ್ಕೆ ಪ್ರೋತ್ಸಾಹ ನೀಡಿದಲ್ಲಿ ಮಾತ್ರ ಇದು ಸಾಧ್ಯ ಎಂದು ಅವರು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬ್ರಹ್ಮಾವರ ತಾಲ್ಲೂಕು ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ ವಿಶ್ವ ರಂಗಭೂಮಿ ದಿನಾಚರಣೆಯ ಸಂದೇಶ ವಾಚಿಸಿದರು.

ಕೋಟ ರಸರಂಗದ ಅಧ್ಯಕ್ಷೆ ಸುಧಾ ಮಣೂರು, ಯಕ್ಷ ಮಹಿಳಾ ಬಳಗದ ಅಧ್ಯಕ್ಷೆ ಸುಶೀಲಾ ಸೋಮಶೇಖರ ಇದ್ದರು.ಕಾರ್ಯಕ್ರಮವನ್ನು ಬಳಗದ ವಸಂತಿ ಹಂದಟ್ಟು ನಿರೂಪಿಸಿ ವಂದಿಸಿದರು.

ಕೋಟದ ವಾಸುದೇವ ರಂಗಮಂಟಪದಲ್ಲಿ ಭಾನುವಾರ ಕೋಟ ರಸರಂಗದ ಹದಿನೈದನೇ ವರ್ಷದ ಮತ್ತು ಕೋಟ ಯಕ್ಷ ಮಹಿಳಾ ಬಳಗದ ಹತ್ತನೇ ವರ್ಷದ ಸವಿನೆನಪಿನಲ್ಲಿ ನಡೆದ ವಿಶ್ವರಂಗಭೂಮಿ ದಿನಾಚರಣೆ ಕಾರ್ಯಕ್ರಮಕ್ಕೆ ಕೋಟದ ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ ಕುಂದರ್ ಚಾಲನೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಬ್ರಹ್ಮಾವರ ತಾಲ್ಲೂಕು ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ, ಕೋಟ ರಸರಂಗದ ಅಧ್ಯಕ್ಷೆ ಸುಧಾ ಮಣೂರು, ಯಕ್ಷ ಮಹಿಳಾ ಬಳಗದ ಅಧ್ಯಕ್ಷೆ ಸುಶೀಲಾ ಸೋಮಶೇಖರ ಇದ್ದರು.

Leave a Reply

Your email address will not be published. Required fields are marked *