Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ: ಶಿರಿಯಾರ ದೇವ ರೈಸ್‌ ಮಿಲ್ ನಲ್ಲಿ ಅಕ್ರಮ ಅಕ್ಕಿ ಸಂಗ್ರಹಣೆ; ದಾಳಿ ನಡೆಸಿದ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ

ಕೋಟ: ಶಿರಿಯಾರ ದೇವ ರೈಸ್‌ ಮಿಲ್ ನಲ್ಲಿ ಅಕ್ರಮ ಅಕ್ಕಿ ಸಂಗ್ರಹಣೆ ಇರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ  ಭಾನುವಾರ ನಡೆದಿದೆ.

ಜಿಲ್ಲಾಧಿಕಾರಿಗಳ ನೀಡಿದ ಮಾಹಿತಿಯಂತೆ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ ಹೆಗ್ಡೆ, ಕೋಟ ಹೋಬಳಿಯ ಕಂದಾಯ ಮಂಜುನಾಥ ಮತ್ತು ಇತರೆ ಸಿಬ್ಬಂದಿ ಜೊತೆ ದಾಳಿ ನಡೆಸಿದ್ದರು.

ಈ ಸಂದರ್ಭ ಮಂಜುನಾಥ ಅವರು ಮೊಬೈಲ್ ನಲ್ಲಿ ಪೋಟೊ ತೆಗೆಯಲು ಮುಂದಾದಾಗ ರೈಸ್ ಮಿಲ್ ನ ಪ್ರಭಾಕರ ಮೊಬೈಲ್ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿ ಪಡಿಸಿದರು.

ಈ ಬಗ್ಗೆ ಕೋಟ ಠಾಣೆಯಲ್ಲಿ ಮಂಜುನಾಥ ಅವರು ದೂರು ದಾಖಲಿಸಿದ್ದು, ರೈಸ್ ಮಿಲ್ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿ ಇಟ್ಟ  ಸುಮಾರು ೫೪೦ ಕೆ.ಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *