ಕೋಟ: ಇಲ್ಲಿನ ಮಣೂರು ಪಡುಕರೆಯ ಸರಕಾರಿ ಸಂಯುಕ್ತ ಪ್ರೌಢಶಾಲಾ ವಠಾರದಲ್ಲಿ ಗೀತಾನಂದ ಪೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಲ್ಲಿ ಎಳೆಬಿಸಿಲು( ಇದು ಶಾಲೆಯಲ್ಲ ಬಯಲು) 15ರಿಂದ21 ಎಪ್ರಿಲ್ ವರೆಗಿನ ಬೆಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವನ್ನು ಸ್ಥಳೀಯ ಮಣೂರು ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜಿ, ಆಯೋಜಕರಾದ ರಮೇಶ ಹೆಚ್ ಕುಂದರ್ ಶಾಲಾ ಎಸ್ಡಿಎಮ್ಸಿ ಅಧ್ಯಕ್ಷ ಜಯರಾಮ ಶೆಟ್ಟಿ, ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸತ್ಯನಾರಾಯಣ, ಪ್ರಾಥಮಿಕ ವಿಭಾಗದ ಮುಖ್ಯೋಪಾದ್ಯಾಯ ಮಂಜುನಾಥ ಹೊಳ್ಳ ಮತ್ತು ಗೀತಾನಂದ ಪೌಂಡೇಶನ್ ಸಂಯೋಜಕ ರವಿಕಿರಣ್ ಅವರು ಶಿಬಿರಾರ್ಥಿಗಳೊಂದಿಗೆ ಲಗೋರಿ ಆಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗೀತಾನಂದ ಟ್ರಸ್ಟ್ನ ನಿರ್ದೇಶಕಿ ವ್ಯೆಷ್ಣವಿ ರಕ್ಷಿತ್ ಕುಂದರ್ ಮತ್ತು ಜನತಾ ಸಿಬ್ಬಂದಿ ಅಶ್ವಿನಿ , ಸಚಿನ್ ಮತ್ತು ಶಿಬಿರಾರ್ಥಿಗಳು ಹಾಜರಿದ್ದರು..
ಮಣೂರು ಪಡುಕರೆಯ ಶಾಲೆಯಲ್ಲಿ ಬೇಸಿಗೆ ಶಿಬಿರವನ್ನು ಗಣ್ಯರು ಲಗೋರಿ ಆಡುವುದರ ಮೂಲಕ ವಿಶಿಷ್ಟವಾಗಿ ಚಾಲನೆ ನೀಡಿದರು. ಮಣೂರು ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜಿ, ಆಯೋಜಕರಾದ ರಮೇಶ ಹೆಚ್ ಕುಂದರ್ ಶಾಲಾ ಎಸ್ಡಿಎಮ್ಸಿ ಅಧ್ಯಕ್ಷ ಜಯರಾಮ ಶೆಟ್ಟಿ, ಗೀತಾನಂದ ಟ್ರಸ್ಟ್ನ ನಿರ್ದೇಶಕಿ ವ್ಯೆಷ್ಣವಿ ರಕ್ಷಿತ್ ಕುಂದರ್ ಮತ್ತಿತರರು ಇದ್ದರು.