ಕೋಟ: ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆಯನ್ನು ಕಲ್ಪಿಸಲಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು.
ಕೋಟದ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ,ಕೋಟ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ,ಕೋಟ ಗ್ರಾಮಪಂಚಾಯತ್ ನೇತೃತ್ವದಲ್ಲಿ ಬೇಸಿಗೆ ಶಿಬಿರದ ಚಿತ್ತಾರ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಾಲಾ ಜೀವನ ಹೊರತು ಪಡಿಸಿ ಇನ್ನಿತರ ಚಟುವಟಿಗೆ ಈ ಶಿಬಿರಗಳು ಸಹಕಾರಿಯಾಗಲಿದೆ,ಸಂಘಸAಸ್ಥೆಗಳು ಇಂಥಹ ಮಾದರಿ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರಲ್ಲದೆ ಶಿಬಿರಗಳು ಸಮಾಜಕ್ಕೆ ಪೂರಕವಾಗಿ ಭವ್ಯ ಭವಿಷ್ಯ ಬರೆಯುವ ಮುನ್ನುಡಿಯಾಗಲಿ ಎಂದು ಶುಭಹಾರೈಸಿದರು.
ಮೊದಲ ಪುಟಾಣಿಗಳ ಕಲರವ
ಇದೇ ಮೊದಲ ಎಂಬAತೆ ಸುಮಾರು 4ವರ್ಷದಿಂದ 7ವರ್ಷದ ಒಳಗಿನ ಪುಟಾಣಿಗಳಗೆ ಶಿಬಿರದಲ್ಲಿ ಅವಕಾಶ ಕಲ್ಪಿಸಲಾಗಿದೆ, ಗುರುವಾರ ಪ್ರಾರಂಭಗೊAಡ ಶಿಬಿರಕ್ಕೆ ಮೂವತ್ತಕ್ಕೂ ಅಧಿಕ ಮಕ್ಕಳು ಭಾಗಿಯಾದರಲ್ಲದೆ ಉತ್ಸಾಹ ಕೂಡಾ ಎದ್ದುಕಾಣುತ್ತಿತ್ತು.ಸಂಪನ್ಮೂಲ ವ್ಯಕ್ತಿಯಾಗಿ ಕೋಟತಟ್ಟು ಜಯಲಕ್ಷಿ÷್ಮ ಟೀಚರ್,ಕುಮಾರ್ ,ರೋಹಿತ್ ಬೈಕಾಡಿ ಭಾಗಿಯಾದರು.
ಸಭೆಯ ಅಧ್ಯಕ್ಷತೆಯನ್ನು ಕೋಟ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಸಂಪನ್ಮೂಲ ವ್ಯಕ್ತಿ ಜಯಕ್ಷಿ÷್ಮÃ ಟೀಚರ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಇಂಡಿಕಾ ಕಲಾ ಬಳಗದ ಸಂತೋಷ್ ಕುಮಾರ್ ಕೋಟ ಪ್ರಾಸ್ತಾವಿಕ ಮಾತನಾಡಿದರು.
ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಶಕೀಲ.ಎನ್.ಪೂಜಾರಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪಂಚವರ್ಣದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು.ಸದಸ್ಯೆ ಪ್ರೇಮಾ ಆಚಾರ್ ವಂದಿಸಿದರು.
ಕೋಟದ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ,ಕೋಟ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ,ಕೋಟ ಗ್ರಾಮಪಂಚಾಯತ್ ನೇತೃತ್ವದಲ್ಲಿ ಬೇಸಿಗೆ ಶಿಬಿರದ ಚಿತ್ತಾರ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮವನ್ನು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು. ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಸಂಪನ್ಮೂಲ ವ್ಯಕ್ತಿ ಜಯಕ್ಷಿ÷್ಮÃ ಟೀಚರ್ ಉಪಸ್ಥಿತರಿದ್ದರು.