News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕುಕ್ಕೆಹಳ್ಳಿ : ತೆಂಗಿನ ಮರ ಬಿದ್ದು ಮನೆ ಮತ್ತು ಎರಡು ರಿಕ್ಷಾಕ್ಕೆ ಹಾನಿ

ಉಡುಪಿ ಜಿಲ್ಲೆಯಲ್ಲಿ ಬಾರಿ ಗಾಳಿಮಳೆಯಿಂದ ಮನೆಯ ಮೇಲೆ ತೆಂಗಿನಮರ ಬಿದ್ದು ಮನೆ ಹಾಗೂ ಎರಡು ಆಟೋ ರಿಕ್ಷಾ ಜಖಂಗೊಂಡ ಘಟನೆ ಜು. 26 ರಂದು ಶುಕ್ರವಾರ ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಸಂಭವಿಸಿದೆ.

ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಬೀಸಿದ ಗಾಳಿ ಮಳೆಗೆ ಬಜೆಯ ಅಮ್ಮಣ್ಣಿ ಶೇರಿಗಾರ್ತಿ
ಎಂಬವರ ಮನೆ ಸಮೀಪದ ತೆಂಗಿನಮರ ಬಿದ್ದು ಮನೆ ಹಾನಿಯಾಗಿದ್ದು, ಮನೆ ಬಳಿ ನಿಲ್ಲಿಸಿದ್ದ ಅಮ್ಮಣಿಯವರ ಮಕ್ಕಳಾದ ಗಣಪತಿ ಶೇರಿಗಾರ ಹಾಗೂ ರವಿ ಶೇರಿಗಾರ
ಎಂಬವರ ಆಟೋ ರಿಕ್ಷಾಗಳು ಸಂಪೂರ್ಣ ಜಖಂಗೊಂಡಿವೆ ಎಂದು ತಿಳಿದು ಬಂದಿದೆ. ಇದರಿಂದ ಲಕ್ಷಾಂತರ ನಷ್ಟ ರೂ. ಉಂಟಾಗಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *