Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಟೀಮ್ ನೆಷನ್ ಫಸ್ಟ್(ರಿ) ವತಿಯಿಂದ ರಕ್ತದಾನ ಶಿಬಿರ ಆಯೋಜನೆ

ಟೀಮ್ ನೆಷನ್ ಫಸ್ಟ್(ರಿ) ಇದರ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವು ಅಜ್ಜರಕಾಡಿನ ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ಆಗಸ್ಟ 3ರಂದು ನಡೆಯಿತು. ಉಡುಪಿಯ ಶಾಸಕರಾದ ಯಶಪಾಲ್ ಎ ಸುವರ್ಣ ರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಟೀಮ್ ನೇಷನ್ ಫಸ್ಟ್ ನ ಅಧ್ಯಕ್ಷರಾದ ಸೂರಜ್ ಕಿದಿಯೂರ್ ಮಾತನಾಡಿ ರಕ್ತದಾನ ಮಹಾದಾನ, ಚಿಕಿತ್ಸೆಯ ಮೂಲಕ ವೈದ್ಯರು ರೋಗಿಯನ್ನು ಗುಣಪಡಿಸಬಹುದು ಆದರೆ ಒಬ್ಬ ಸಾಮಾನ್ಯ  ಮನುಷ್ಯ ರಕ್ತದಾನದ ಮೂಲಕ ಒಬ್ಬರ ಜೀವವನ್ನು ಉಳಿಸಬಹುದು ಎಂದು ಹೇಳಿದರು. ಈ ಸಂದರ್ಭದಲ್ಲಿ   ನಮ್ಮ ತಂಡದ ತರಬೇತಿ ಶಿಬಿರದಲ್ಲಿ ತರಬೇತಿ ಪಡೆದುಕೊಂಡು ಅಗ್ನಿವೀರ್ ಸ್ಕೀಮ್ ನ ಮೂಲಕ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಶಮಂತ್ ಕೆ ಸುಳ್ಯ ಇವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಡಾ. ರಾಜೇಂದ್ರ ಕೆ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಡಾ. ರಾಮಚಂದ್ರ ಪಾಟ್ಕರ್ ದೈಹಿಕಶಿಕ್ಷಣ ನಿರ್ದೇಶಕರು  ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ  , ತಂಡದ ಉಪಾಧ್ಯಕ್ಷರಾದ ಡಾ. ಅತುಲ್ ಹಾಗೂ KMCಯ ಡಾ. ದೀಪ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತಂಡದ ಕಾರ್ಯದರ್ಶಿ ಸಾತ್ವಿಕ್ ಗಡಿಯಾರ್, ಸದಸ್ಯರಾದ ಸಂತೋಷ್ ಕರ್ಕೇರ , ಪೂಜಾ ಸೂರಜ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *