Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮಣೂರು ಪಡುಕರೆ ಪ್ರೌಢಶಾಲೆ ಕಬಡ್ಡಿ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೋಟ:  ಉಡುಪಿ ಜಿಲ್ಲಾಡಳಿತ, ಶಾಲಾಶಿಕ್ಷಣ ಉಡುಪಿ ಜಿಲ್ಲೆ , ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ಹಾಗೂ ಸರಕಾರಿ ಪ್ರೌಢಶಾಲೆ ಕುಕ್ಕೆಹಳ್ಳಿ ಸಂಯುಕ್ತ ಆಶ್ರಯದಲ್ಲಿ ನಡೆದ  ವಯೋಮಾನದ 17ರದೊಳಗಿನ  ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಸಂಯುಕ್ತ ಪ್ರೌಢಶಾಲೆ ಮಣೂರು ಪಡುಕರೆ ಸಂಸ್ಥೆಯ ತಂಡವು ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಬಾಲಕಿಯರ  ತಂಡವು ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ಕೊಂಡಿದೆ. ಶಾಲಾ ಕಬಡ್ಡಿ ತಂಡದ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ತರಬೇತು ನೀಡಿದ ಕುಮಾರ್ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕೋಚ್ ಶರತ್ ಇವರಿಗೆ ಶಾಲಾ ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷರು-ಸದಸ್ಯರು, ಮುಖ್ಯಶಿಕ್ಷಕರು , ಶಿಕ್ಷಕ ವೃಂದ, ಪೋಷಕರು, ಅಭಿನಂದನೆ ಸಲಿಸಿದ್ದಾರೆ.

Leave a Reply

Your email address will not be published. Required fields are marked *