Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸೆ.30ಕ್ಕೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಅರಿವು ನಿಮ್ಮಗಿರಲಿ ನೆರವು 10ನೇ ಮಾಲಿಕೆ, ಯುವಕ ಮಂಡಲದಿಂದ ಆರೋಗ್ಯ ಮಾಹಿತಿ ಕಾರ್ಯಕ್ರಮ

ಕೋಟ: ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಾತೃಸಂಸ್ಥೆ ಕೋಟ ಪಂಚವರ್ಣ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಇದೇ ಸೆ.30ರಂದು ಸಾಮಾಜಿಕ ಕಾರ್ಯಕ್ರಮ ಹದಿಹರೆಯದವರ ಸಮಸ್ಯೆಗಳು ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ.10ನೇ ಮಾಲಿಕೆ ಅರಿವು ನಿಮಗಿರಲಿ ನೆರವು ಶೀರ್ಷಿಕೆಯಡಿ ಕೋಟ ಮಣೂರು ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿನ ಸಂಯೋಜನೆಯೊAದಿಗೆ ಇಲ್ಲಿನ ಕೋಟ ಮಣೂರು ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪೂರ್ವಾಹ್ನ 11-00ಕ್ಕೆ ಕಾರ್ಯಕ್ರಮ ಹಮ್ಮಿಕೊಂಡಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಜಿಲ್ಲಾಸ್ಪತ್ರೆಯ ಆಯುಷ್ ವಿಭಾಗದ ವೈದ್ಯಾಧಿಕಾರಿ ಡಾ.ಸ್ವಾತಿ ಶೇಟ್  ಭಾಗವಹಿಸಲಿದ್ದಾರೆ ಹಾಗೂ ಪಂವರ್ಚ ಯುವಕ ಮಂಡಲದ ವತಿಯಿಂದ ಪೂರ್ವಾಹ್ನ 11.30ಕ್ಕೆ ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಯಶಶ್ರೀ ಶೆಟ್ಟಿ ಇವರಿಂದ ಆರೋಗ್ಯ ಮಾಹಿತಿ  ಕಾರ್ಯಕ್ರಮ ಜರಗಲಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಹಾಗೂ ಪಂಚವರ್ಣ ಮಹಿಳಾ ಮಂಡಲದ ವ ಆಧ್ಯಕ್ಷೆ ಲಲಿತಾ ಗಿಳಿಯಾರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *