Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅನಾಥ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ; ಸೂಚನೆ

ಮಲ್ಪೆ,ಅ.15; ಕಾರ್ತಿಕ್ ಬಿಲ್ಡಿಂಗ್ ಬಳಿ, ಅನಾಥ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ, ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಮಂಗಳವಾರ ನಡೆದಿದೆ. ಕಾರ್ಯಚರಣೆಗೆ ತಾಲೂಕು ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಸಿಬ್ಬಂದಿಗಳು ನೆರವಿಗೆ ಬಂದಿದ್ದರು.

ರಕ್ಷಿಸಲ್ಪಟ್ಟ ವೃದ್ಧರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ದೇಹ ನಿತ್ರಾಣದಿಂದ ಮಾತನ್ನಾಡವ ಸ್ಥಿತಿಯಲ್ಲಿಲ್ಲದ ಕಾರಣದಿಂದ ಹೆಸರು ವಿಳಾಸ ತಿಳಿದುಬಂದಿಲ್ಲ. ವೃದ್ಧರನ್ನು ಯಾರೋ ಕರೆದು ತಂದು ಬಿಟ್ಟು ಹೋಗಿದ್ದಾರೆಂದು ಹೇಳಲಾಗುತ್ತಿದೆ. ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Leave a Reply

Your email address will not be published. Required fields are marked *