Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾಹಕರ ಹಕ್ಕು , ಕಾಯ್ದೆ ಕುರಿತು ಮಾಹಿತಿ ಕಾರ್ಯಕ್ರಮ

ಕೋಟ: ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಗ್ರಾಹಕರ ಹಕ್ಕು ಕಾಯ್ದೆ ರಕ್ಷಣೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಇತ್ತೀಚಿಗೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ಅಖಿಲ ಭಾರತೀಯ ಗ್ರಾಹಕ್ ಪಂಚಾಯತ್ ಕರ್ನಾಟಕ ಪ್ರಾಂತ್ಯ ಇದರ ಅಧ್ಯಕ್ಷ ನರಸಿಂಹ ನಕ್ಷತ್ರಿ ಕಾರ್ಕಡ ಇವರು ಆಗಮಿಸಿ ಮಕ್ಕಳಿಗೆ ಗ್ರಾಹಕರ ಹಕ್ಕು ಕಾಯ್ದೆ ಇದರ ಕುರಿತಾಗಿ ಮಾಹಿತಿ ನೀಡುತ್ತಾ ಗ್ರಾಹಕರು ತಮಗೆ ಆದ ಮೋಸ, ಅನ್ಯಾಯ ಇದರ ವಿರುದ್ಧ ಹೇಗೆ ಹೋರಾಡಬೇಕು ಎಂದು ತಿಳಿಸಿ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ವಿವೇಕ ಬಾಲಿಕಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಗದೀಶ್ ಹೊಳ್ಳ,ಉಪನ್ಯಾಸಕಾರ ಮಂಜುನಾಥ ಉಪಾಧ್ಯಾ,ಸಂಜೀವ ಗುಂಡ್ಮಿ ಉಪಸ್ಥಿತರಿದ್ದರು.
ಉಪನ್ಯಾಸಕ  ಅಮಿತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಗ್ರಾಹಕರ ಹಕ್ಕು ಕಾಯ್ದೆ ರಕ್ಷಣೆಯ ಬಗ್ಗೆ ಮಾಹಿತಿ ಕಾರ್ಯಕ್ರಮದಲ್ಲಿ  ಅಖಿಲ ಭಾರತೀಯ ಗ್ರಾಹಕ್ ಪಂಚಾಯತ್ ಕರ್ನಾಟಕ ಪ್ರಾಂತ್ಯ ಇದರ ಅಧ್ಯಕ್ಷ ನರಸಿಂಹ ನಕ್ಷತ್ರಿ ಕಾರ್ಕಡ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ ನಾವಡ, ವಿವೇಕ ಬಾಲಿಕಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಗದೀಶ್ ಹೊಳ್ಳ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *