Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕಾರ್ಕಳ:  ಇನ್ನ ಗ್ರಾಮದ ಮನು ಶೆಟ್ಟಿ “ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಆಯ್ಕೆ ..!!

ಕಾರ್ಕಳ : ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಡಪಂ ನಲ್ಲಿ ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು ಕರ್ನಾಟಕದಿಂದ “ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಉದ್ಯಮಿ ಇನ್ನಾ ಉದಯ ಶೆಟ್ಟಿ ಮತ್ತು ಜಿ. ಪಂ ಮಾಜಿ ಸದಸ್ಯೆ ರೇಶ್ಮಾ ಉದಯ ಶೆಟ್ಡಿ ಯವರ ಪುತ್ರಿಯಾಗಿದ್ದಾರೆ.

ವಿಕಸಿತ ಭಾರತದ ನಿರ್ಮಾಣದಲ್ಲಿ ಯುವ ಜನರ ಭಾಗವಹಿಸುವಿಕೆಯನ್ನು ಖಾತ್ರಿಗೊಳಿಸಲು ರಾಷ್ಟ್ಟೀಯ ಮಟ್ಟದ ಯುವ ಪ್ರತಿಭೆಗಳ 2 ದಿನದ ಅಧಿವೇಶನ ದೆಹಲಿಯಲ್ಲಿ ಜನವರಿ 11, ಮತ್ತು 12 ರಂದು ನಡೆಯಲಿದ್ದು ಭಾರತಾದ್ಯಂತದ 3 ಸಾವಿರ ಯುವಕ ಯುವತಿಯರು ಆಯ್ಕೆಯಾಗಿದ್ದಾರೆ. ದೇಶದ ಅಭಿವೃದ್ದಿಗೆ ಸಂಬಂಧಿಸಿದಂತೆ ವಿಕಸಿತ ಭಾರತದ ವಿವಿಧ ಕ್ಷೇತ್ರಗಳ ವಿಷಯಗಳ ಬಗ್ಗೆ ಚರ್ಚೆ, ವಿಚಾರ ಮಂಡನೆ ಮತ್ತು ಸಂವಾದಗಳು ನಡೆಯಲಿದ್ದು ಆಹ್ವಾನಿತರು ತಮ್ಮ ವಿಚಾರಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ವಿವಿಧ ಇಲಾಖೆಗಳ ಪ್ರದರ್ಶನಗಳು ಇರಲಿವೆ. ಪ್ರಧಾನಿ ನರೇಂದ್ರ ಮೋದಿಯೂ ಸೇರಿದಂತೆ ಕೇಂದ್ರ ದ ವಿವಿಧ ಇಲಾಖಾ ಮಂತ್ರಿಗಳು, ಅಧಿಕಾರಿಗಳು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪರಿಣಿತರೊಂದಿಗೆ ಸಂವಾದ ನಡೆಯಲಿದೆ.

ಮನು ಶೆಟ್ಟಿಯವರು ಉಡುಪಿ ಎಂಜಿಎಂ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿನಿಯಾಗಿದ್ದು, ವಿದ್ಯಾರ್ಥಿ ಸಂಘಟನೆ ಎಬಿವಿಪಿ ಹಾಗೂ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಪಡುಬಿದ್ರಿಯ ಸಕ್ರೀಯ ಸದಸ್ಯೆಯಾಗಿದ್ದಾರೆ.

Leave a Reply

Your email address will not be published. Required fields are marked *