Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ- ಜನತಾ ಸಮೂಹ ಸಂಸ್ಥೆಯಲ್ಲಿ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ಆಚರಣೆ.

ಕೋಟ: ಇಲ್ಲಿನ ಕೋಟ ಜನತಾ ಸಮೂಹ ಸಂಸ್ಥೆಯ ಆವರಣದಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ
ಕಾರ್ಯಕ್ರಮದ ಅಂಗವಾಗಿ ಸಿಬ್ಬಂದಿಗಳಿಗೆ ಸುರಕ್ಷತಾ ಮಾಹಿತಿ ಕಾರ್ಯಗಾರವನ್ನು  ಮಂಗಳವಾರ ನಡೆಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕರಾದ ಆನಂದ ಸಿ ಕುಂದರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆಯು ಕಾರ್ಮಿಕರ ಸುರಕ್ಷತೆಗಾಗಿ ಯಾವುದೇ ಉಪಕರಣ.ಮತ್ತು ವ್ಯವಸ್ಥೆಯನ್ನು ಮಾಡಲು ಸಿದ್ದವಿದೆ ಆದರೆ ಕಾರ್ಮಿಕರು ಅದನ್ನು ತನ್ನ ಮೂಲಭೂತ ಕರ್ತವ್ಯವೆಂದು ಭಾವಿಸಿದಾಗ ಮಾತ್ರ 100% ಸುರಕ್ಷತೆಯು ಸಾದ್ಯ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಸುರಕ್ಷತಾ ಚಟುವಟಿಕೆಗಳಲ್ಲಿನ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ರಕ್ಷಿತ್ ಎ ಕುಂದರ್. ಸಂಸ್ಥೆಯ ಶ್ರೀನಿವಾಸ ಕುಂದರ್, ಡಾ. ಧಾನೇಶ್ ಜೀವಾನಿ, ಅಶ್ವತ್ ಜೆ ಶೆಟ್ಟಿ,ಮಿಥುನ್ ಕುಮಾರ್ ಉಪಸ್ಥಿತರಿದ್ದರು. ಸುರಕ್ಷತಾಧಿಕಾರಿ ಕಾರ್ತಿಕ್ ಆಚಾರ್ಯ ಕಾರ್ಯಕ್ರಮ ಸಂಘಟಿಸಿ ರವಿಕಿರಣ್ ಕಾರ್ಯಕ್ರಮ ನಿರೂಪಿಸಿ, ಸಚಿನ್ ಸಹಕರಿಸಿದರು. ಕೋಟ ಜನತಾ ಸಮೂಹ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಆನಂದ ಸಿ ಕುಂದರ್ ಮಾತನಾಡಿದರು. ಸಂಸ್ಥೆಯ ನಿರ್ದೇಶಕರಾದ ರಕ್ಷಿತ್ ಎ ಕುಂದರ್. ಸoಸ್ಥೆಯ ಶ್ರೀನಿವಾಸ ಕುಂದರ್, ಡಾ. ಧಾನೇಶ್ ಜೀವಾನಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *