
ಉಡುಪಿ, ಮೇ.30: ಮಿಜೋರಾಂ ರಾಜ್ಯದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು, ಕವಿ ಮುದ್ದಣ ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರಕ್ಕೆ ಶುಕ್ರವಾರ ಭೇಟಿ ನೀಡಿ ಗುರುದೇವರ ದರ್ಶನ ಪಡೆದರು. ಸನ್ನಿಧಾನದಿಂದ ಶ್ರೀ ಗುರುದೇವರ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭ ಮಂದಿರದ ವ್ಯವಸ್ಥಾಪಕ ಸುರೇಂದ್ರ ಶೆಟ್ಟಿ ಕೊರಂಗ್ರಪಾಡಿ, ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಮೆಂಡನ್, ಅರ್ಚಕ ಅಮಿತ್ ಶುಕ್ಲಾ, ತಾರಾನಾಥ್ ಮೇಸ್ತ ಶಿರೂರು, ವಿಶ್ವನಾಥ್ ತೊಟ್ಟಂ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
Leave a Reply