
ಉಡುಪಿ ಜಿಲ್ಲೆಯ ಕೋಟದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಟದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಕೋಟೇಶ್ವರ ನಿವಾಸಿ ಕುಮಾರ (48) ಆತ್ಮಹತ್ಯೆ ಮಾಡಿಕೊಂಡವರು.
ಮದ್ಯ ಸೇವನೆಯ ಚಟವನ್ನು ಬಿಡಿಸುವ ಸಲುವಾಗಿ ಅವರನ್ನು 2025ನೇ ಫೆಬ್ರವರಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರು ಸುಮಾರು 3 ತಿಂಗಳ ಹಿಂದೆಯೇ ರೋಗಿಯನ್ನು ಕರೆದುಕೊಂಡು ಹೋಗುವಂತೆ ತಿಳಿಸಿದ್ದರೂ ಮನೆಯವರು
ಕರೆದೊಯ್ದಿರಲಿಲ್ಲ, ಇದೇ ಕಾರಣಕ್ಕೆ ಅವರು ಮಾನಸಿಕ ಖನ್ನತೆಗೆ ಒಳಗಾಗಿ ಆಸ್ಪತ್ರೆಯ ವಾರ್ಡ್ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Reply