News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಮೂರ್ತೆದಾರರ ಸಹಕಾರಿ ಸಂಘ ಮಹಾಸಭೆ  ,397 ಕೋಟಿ ರೂ. ವ್ಯವಹಾರ, 1.09 ಕೋಟಿ ನಿವ್ವಳ ಲಾಭ

ಕೋಟ: ಕೋಟ ಮೂರ್ತೆದಾರರ ಸಹಕಾರಿ ಸಂಘದ 34ನೇ ಮಹಾಸಭೆ ಇತ್ತೀಚಿಗೆ ಸಂಘದ ಪ್ರಧಾನ ಕಛೇರಿಯ ಎಸ್ ಬಂಗಾರಪ್ಪ ಸಭಾಂಗಣದಲ್ಲಿ ಜರಗಿತು. ಈ ಸಂದರ್ಭದಲ್ಲಿ 2024-25ನೇ ಸಾಲಿನಲ್ಲಿ 397 ಕೋಟಿ ರೂ. ವ್ಯವಹಾರ ನಡೆಸಿ ರೂ. 1.09 ಕೋಟಿ ನಿವ್ವಳ ಲಾಭ ಗಳಿಸಿದ್ದು, ಶೇ. 12 ಡಿವಿಡೆಂಡ್‌ನ್ನು ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಘೋಷಿಸಿ, ಸಂಘವು ಕೋಟ, ಬಾರ್ಕೂರು, ಸಾಸ್ತಾನ, ಕೊಕ್ಕರ್ಣೆ, ಉಡುಪಿ-ಪುತ್ತೂರು, ಹೂಡೆ ಸೇರಿದಂತೆ ಸಂಘದ ಕಾರ್ಯವ್ಯಾಪ್ತಿಯಲ್ಲಿ 6 ಬ್ಯಾಕಿಂಗ್ ಶಾಖೆಗಳನ್ನು ಹೊಂದಿದ್ದು, ಶೀಘ್ರ ಬ್ಯಾಂಕಿAಗ್ ಸೇವೆ ನೀಡುತ್ತಿದೆ.

ಸಂಘವು 13052 ಸದಸ್ಯರ ಬಲ ಹೊಂದಿದ್ದು ರೂ. 1.45 ಕೋಟಿ ಪಾಲು ಬಂಡವಾಳ, 83.86 ಕೋಟಿ ರೂ. ಠೇವಣಿ, 69.07 ಕೋಟಿ ರೂ. ಹೊರಬಾಕಿ ಸಾಲ ಇದ್ದು, ಸಂಘದಿAದ ರೂ. 25.84 ಕೋಟಿ  ವಿವಿಧ ಸಹಕಾರಿ ಸಂಘ ಹಾಗೂ ಬ್ಯಾಂಕ್‌ನಲ್ಲಿ ವಿನಿಯೋಗಿಸಿದೆ. ಹಾಗೂ ವಿವಿಧ ನಿಧಿಗಳು ರೂ. 10.79 ಕೋಟಿ ಹೊಂದಿದೆಯಲ್ಲದೆ. ಸಂಘದ ದುಡಿಯುವ ಬಂಡವಾಳ 104.74 ಕೋಟಿಗೂ ಮೀರಿದೆ. ಸತತ 29 ವರ್ಷಗಳಿಂದ ಎ ತರಗತಿ ಆಡಿಟ್ ವರ್ಗೀಕರಣ ಪಡೆದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ ಅವರು ಸಂಘದಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸೇಫ್ ಲಾಕರ್, ಆರ್.ಟಿ.ಜಿ.ಎಸ್, ನೆಫ್ಟ್, ಇ-ಸ್ಟಾö್ಯಂಪಿAಗ್ ಸೌಲಭ್ಯ ಹಾಗೂ ಆರ್.ಟಿ.ಸಿ ವಿತರಿಸಲಾಗುತ್ತಿದೆ. ಸಂಘವು ಕೋಟದಲ್ಲಿ ಸ್ವಂತ ಸುಸಜ್ಜಿತ ಕೇಂದ್ರ ಕಛೇರಿ ಹಾಗೂ ವಾಣಿಜ್ಯ ಸಂಕೀರ್ಣ ಹೊಂದಿದ್ದು, ಸಂಘದ ಸಾಸ್ತಾನ ಶಾಖೆ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘವು ಮಹಿಳಾ ಸಶಕ್ತೀಕರಣಕ್ಕಾಗಿ 278 ಕಲ್ಪತರು ಮಹಿಳಾ ಸ್ವಸಹಾಯ ಗುಂಪುಗಳನ್ನು ಪ್ರಾಯೋಜಿಸಿದ್ದು ರೂ. 5.99 ಕೋಟಿ ಸಾಲ ಸೌಲಭ್ಯ ಒದಗಿಸಿದೆ ಎಂದರು.

ಉಚಿತ ಆರೋಗ್ಯ ತಪಾಸಣಾ ಶಿಬಿರ, ಸದಸ್ಯರ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ, ಉನ್ನತ ವ್ಯಾಸಂಗ ನಿಧಿಯಿಂದ ಧನ ಸಹಾಯ, ಸಂಘದ ಸದಸ್ಯರಿಗೆ ಸಾಮೂಹಿಕ ವಿಮೆ, ಮರಣ ನಿಧಿ, ಸದಸ್ಯರ ಸಹಾಯಕ ನಿಧಿ ಮೂಲಕ ಅನಾರೋಗ್ಯಕ್ಕೆ ಒಳಗಾದ ಸದಸ್ಯರಿಗೆ ಸಹಾಯಹಸ್ತ, ಸದಸ್ಯರ ಕ್ಷೇಮಾಭಿವೃದ್ಧಿ ನಿಧಿಯಿಂದ ರೂ. 1 ಲಕ್ಷ ವೈಯಕ್ತಿಕ ಸಾಲ ಹಾಗೂ ಸ್ವಸಹಾಯ ಗುಂಪಿನ ಸಾಲ ಪಡೆದ ಸದಸ್ಯರು ಮೃತರಾದಲ್ಲಿ ಬಾಕಿ ಸಾಲದ ಮೊತ್ತದ ಶೇಕಡಾ 25ರಷ್ಟನ್ನು ಕ್ಷೇಮಾಭಿವೃದ್ಧಿ ನಿಧಿಯಿಂದ ಭರಿಸಲಾಗುತ್ತಿದೆ ಎಂದು ವಾರ್ಷಿಕ ಮಹಾಸಭೆಯ ವರದಿಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು ತಿಳಿಸಿದರು.

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ಜಯರಾಮ ಪೂಜಾರಿ ಬಾರ್ಕೂರು, ಮಾಜಿ ಅಧ್ಯಕ್ಷರಾದ  ರಾಜು ಪೂಜಾರಿ, ಪಿ. ಕೃಷ್ಣ ಪೂಜಾರಿ ಪಾರಂಪಳ್ಳಿ, ನಿರ್ದೇಶಕರಾದ  ಜಿ. ಸಂಜೀವ ಪೂಜಾರಿ ಕೋಡಿ,  ರಾಮ ಪೂಜಾರಿ,  ಮಂಜುನಾಥ ಪೂಜಾರಿ ಬಾರ್ಕೂರು, ಕೃಷ್ಣ ಪೂಜಾರಿ ಪಿ ಕೋಡಿ ಕನ್ಯಾಣ, ಪ್ರಭಾವತಿ ಡಿ. ಬಿಲ್ಲವ ಕೋಟ, ಭಾರತಿ ಎಸ್. ಪೂಜಾರಿ ಕರಿಕಲ್ ಕಟ್ಟೆ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಕೃಷ್ಣ ಹಾಗೂ ಶ್ರೀದೇವಿ ಕಲ್ಕೂರ ಉಪಸ್ಥಿತರಿದ್ದರು. ಹಿರಿಯ ವ್ಯವಸ್ಥಾಪಕರಾದ ಉದಯ ಪೂಜಾರಿ ಕೋಡಿ ವೇದಿಕೆಗೆ ಆಹ್ವಾನಿಸಿದರು, ಕೋಟ ಶಾಖೆಯ ಹಿರಿಯ ವ್ಯವಸ್ಥಾಪಕರಾದ ದಿನೇಶ್ ಪೂಜಾರಿ ಬಾರ್ಕೂರು ಸ್ವಾಗತಿಸಿ, ನಿತೇಶ್ ಹಂದಟ್ಟು ವಂದಿಸಿದರು, ಹಿರಿಯ ವ್ಯವಸ್ಥಾಪಕರಾದ ರಮೇಶ್ ಪೂಜಾರಿ ಬಾರ್ಕೂರು ಕಾರ್ಯಕ್ರಮ ನಿರೂಪಿಸಿದರು.

ಕೋಟ ಮೂರ್ತೆದಾರರ ಸಹಕಾರಿ ಸಂಘದ 34ನೇ ಮಹಾಸಭೆ ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಅಧ್ಯಕ್ಷತೆಯಲ್ಲಿ ಜರಗಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು, ಸಂಘದ ಉಪಾಧ್ಯಕ್ಷ ಜಯರಾಮ ಪೂಜಾರಿ ಬಾರ್ಕೂರು, ಮಾಜಿ ಅಧ್ಯಕ್ಷರಾದ  ರಾಜು ಪೂಜಾರಿ, ಪಿ. ಕೃಷ್ಣ ಪೂಜಾರಿ ಪಾರಂಪಳ್ಳಿ, ನಿರ್ದೇಶಕರಾದ  ಜಿ. ಸಂಜೀವ ಪೂಜಾರಿ ಕೋಡಿ ಇದ್ದರು.

Leave a Reply

Your email address will not be published. Required fields are marked *