News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ- ಪೂರ್ವ ಮುಂಗಾರು ವಿಕಸಿತ ಕೃಷಿ ಸಂಕಲ್ಪ ಅಭಿಯಾನ-2025 ಕೃಷಿ ಮಾಹಿತಿ ಕಾರ್ಯಕ್ರಮ

ಕೋಟ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ,ಭಾರತೀಯ ಕೃಷಿ ಅನುಸಂಧಾನ ಪರಿಷತ್ತು, ನವದೆಹಲಿ, ಅಟಾರಿ-11, ವಿಸ್ತರಣಾ ನಿರ್ದೇಶನಾಲಯ, ಶಿವಮೊಗ್ಗ ,ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ, ಉಡುಪಿ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ,ಕೋಟ ಗ್ರಾಮಪಂಚಾಯತ್, ಪ್ರಕೃತಿ ಸಂಜೀವಿನಿ ಸಂಘ ಕೋಟ.ಗ್ರಾ.ಪಂ,ಸ್ಥಳೀಯ ಸಂಘ ಸಂಸ್ಥೆಗಳು, ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಪೂರ್ವ ಮುಂಗಾರು ವಿಕಸಿತ ಕೃಷಿ ಸಂಕಲ್ಪ ಅಭಿಯಾನ-2025 ಕೃಷಿ ಮಾಹಿತಿ ಕಾರ್ಯಕ್ರಮ ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಮಾತನಾಡಿ ಕೇಂದ್ರ ಸರಕಾರ ರೈತ ಸಮುದಾಯಕ್ಕೆ ವಿವಿಧ ರೈತೋಪಯೋಗಿ ಕಾರ್ಯಕ್ರಮಗಳನ್ನು ನೀಡುತ್ತಿದೆ ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು  ,ಪ್ರಸ್ತುತ ಕಾಲದಲ್ಲಿ ಯಂತ್ರೋಪಕರಣಗಳ ಮೂಲಕ ಕೃಷಿ ಕಾಯಕ ನಡೆಸಲಾಗುತ್ತಿದೆ ಇದರಿಂದ ಕೂಲಿಯಾಳುಗಳ ಸಮಸ್ಯೆಯನ್ನು ತಗ್ಗಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬ್ರಹ್ಮಾವರ ತಾಲೂಕಿನ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಾದ ಸುಪ್ರಭಾ,ಡಾ.ರಾಜೀವ,ಡಾ.ರೇವಣ್ಣ,ಉಡುಪಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್,ಡಾ ಭೂಮಿಕಾ ಭಾಗಹಿಸಿಸಿದರು.
ಸಭೆಯ ಅಧ್ಯಕ್ಷತೆಯನ್ನು ಕೋಟ ಪಂಚಾಯತ್ ಉಪಾಧ್ಯಕ್ಷ  ಪಾಂಡು ಪೂಜಾರಿ ವಹಿಸಿದ್ದರು.

ರೈತ ಉತ್ಪಾದಕ ಕಂಪನಿಯ ಮುಖ್ಯಸ್ಥ ಶ್ರಾವಿತ್ ಶೆಟ್ಟಿ,ಬ್ರಹ್ಮಾವರ ಕೃಷಿ ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲ ಸುಧೀರ್ ಕಾಮತ್ ಕೆ.ವಿ , ಕೋಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಉಪಸ್ಥಿತರಿದ್ದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಧನಂಜಯ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು.ಕಾರ್ಯಕ್ರಮವನ್ನು ಮತ್ಸö್ಯ ವಿಜ್ಞಾನ ಡಾ.ಸದಾನಂದ ಆಚಾರ್ಯ ಬಿ, ನಿರೂಪಿಸಿದರು.

ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ,ಕೋಟ ಗ್ರಾಮಪಂಚಾಯತ್, ಪ್ರಕೃತಿ ಸಂಜೀವಿನಿ ಸಂಘ ಕೋಟ.ಗ್ರಾ.ಪಂ,ಸ್ಥಳೀಯ ಸಂಘ ಸಂಸ್ಥೆಗಳು, ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಪೂರ್ವ ಮುಂಗಾರು ವಿಕಸಿತ ಕೃಷಿ ಸಂಕಲ್ಪ ಅಭಿಯಾನ-2025 ಕೃಷಿ ಮಾಹಿತಿ ಕಾರ್ಯಕ್ರಮವನ್ನು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ರೈತ ಉತ್ಪಾದಕ ಕಂಪನಿಯ ಮುಖ್ಯಸ್ಥ ಶ್ರಾವಿತ್ ಶೆಟ್ಟಿ,ಬ್ರಹ್ಮಾವರ ಕೃಷಿ ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲ ಸುಧೀರ್ ಕಾಮತ್ ಕೆ.ವಿ  ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *