
ಇತ್ತೀಚೆಗೆ ನಡೆದ ಥಗ್ ಲೈಫ್ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾಗೆ ದೂರು.
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಇತ್ತಿಚೆಗೆ ನಡೆದ ಥಗ್ ಲೈಫ್ ಚಲನಚಿತ್ರ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ “ಕನ್ನಡ ಹುಟ್ಟಿದ್ದು ತಮಿಳಿನಿಂದ” ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರಿಗೆ ಅಪಮಾನ ಮಾಡಿರುವುದಲ್ಲದೆ ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡಿರುತ್ತಾರೆ. ಅಲ್ಲದೆ, ಕನ್ನಡಿಗರ ಹಾಗೂ ತಮಿಳರ ಮಧ್ಯೆ ವಿಷ ಬೀಜ ಬಿತ್ತುವುದರೊಂದಿಗೆ ಪ್ರತಿ ಬಾರಿ ತಮಿಳು ಹೊಸ ಚಲನಚಿತ್ರ ಬಿಡುಗಡೆ ಸಂದರ್ಭದಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಮಾಡುತ್ತಲೇ ಬಂದಿದ್ದಾರೆ. ಈ ರೀತಿಯ ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಿರುತ್ತಾರೆ ಹಾಗೂ ಇಲ್ಲಿನ ಕನ್ನಡಿಗರು ಮತ್ತು ತಮಿಳರ ಮಧ್ಯೆ ಇರುವ ಸಾಮರಸ್ಯವನ್ನು ಹದಗೆಡುವಂತೆ ಮಾಡಿ ಶಾಂತಿ ಸುವ್ಯವಸ್ಥೆಗೆ ತೊಂದರೆ ಮಾಡುತ್ತಾರೆ.
ಆದ್ದರಿಂದ ಸದ್ರಿ ಕನ್ನಡ ವಿರೋಧಿ ಹೇಳಿಕೆ ನೀಡಿರುವ ಕಮಲ ಹಾಸನ್ ವಿರುದ್ಧ ಕಾನೂನು ರೀತಿಯಲ್ಲಿ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕಾಗಿ ವಿನಂತಿಸುತ್ತೇವೆ. ಈ ಸಂದರ್ಭದಲ್ಲಿ ಅನ್ಸಾರ್ ಅಹಮದ್ ಜಿಲ್ಲಾ ಗೌರವಾಧ್ಯಕ್ಷರು. ಸುಜಯ ಪೂಜಾರಿ ಜಿಲ್ಲಾಧ್ಯಕ್ಷರು ಜಿಲ್ಲಾ ಉಪಾಧ್ಯಕ್ಷರು ಸೈಯದ್ ನಿಜಾಮ್. ಅಲ್ಫೋನ್ಸ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಪೂಜಾರಿ. ಕಾಪು ತಾಲೂಕು ಅಧ್ಯಕ್ಷರು ಚೇತನ್ ಪಡುಬಿದ್ರೆ. ಮಹಿಳಾ ಜಿಲ್ಲಾಧ್ಯಕ್ಷರು ಜ್ಯೋತಿ. ಮಹಿಳಾ ಉಪಾಧ್ಯಕ್ಷರು ದೇವಕಿ ಬಾರ್ಕೂರು. ಮಹಿಳಾ ಕಾರ್ಯದರ್ಶಿ ಚಂದ್ರಕಲಾ. ಜಿಲ್ಲಾ ಸದಸ್ಯ ನಾಗರಾಜ್.ವಿಶ್ವ ಮತ್ತು ಜಿಲ್ಲಾ ಉಳಿದಲ್ಲ ಕರವೇಯ ಸದಸ್ಯರುಗಳು ಉಪಸ್ಥಿತಿಯಲ್ಲಿದ್ದರು
Leave a Reply