Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕಂದಾಯ ದಿನಾಚರಣೆ-2025 ಅಂಗವಾಗಿ ಕ್ರೀಡೋತ್ಸವ ಆಯೋಜನೆ, ಮಾನಸಿಕವಾಗಿ ಸದೃಡರಾಗಲು ಕ್ರೀಡೆ ಅವಶ್ಯ : ಡಿಸಿ ಸಂಗಪ್ಪ

ವರದಿ : ಅಶ್ವಿನಿ ಅಂಗಡಿ

ಬಾಗಲಕೋಟೆ:  ಜುಲೈ 12 (ಹೊಸಕಿರಣ. Com) : ಒತ್ತಡದ ಬದುಕಿನಿಂದ ಹೊರಬಂದು ಮಾನಸಿಕವಾಗಿ ಸದೃಡರಾಗಲು ಕ್ರೀಡಾ ಚಟುವಟಿಕೆಗಳು ಅವಶ್ಯಯವಾಗಿವೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಕಂದಾಯ ಇಲಾಖೆ ನೌಕರರ ಸಂಘ, ಜಿಲ್ಲಾ ಕಂದಾಯ ಇಲಾಖೆ ವಿವಿಧ ವೃಂದ ಸಂಘಗಳ ಸಹಯೋಗದಲ್ಲಿ ಕಂದಾಯ ದಿನಾಚರಣೆ-2025ರ ಅಂಗವಾಗಿ ಹಮ್ಮಿಕೊಂಡ ಎರಡು ದಿನಗಳ ಕ್ರೀಡೋತ್ಸವಕ್ಕೆ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಆಕಾಶದಲ್ಲಿ ಬಲೂನ  ಹಾರಿ ಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಮನುಷ್ಯನಿಗೆ ಮಾನಸಿಕ ಮತ್ತು ಆರೋಗ್ಯ ಮುಖ್ಯವಾಗಿದ್ದು, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ಕ್ರೀಡೆಗಳಿಂದ ಮಾನಸಿಕ, ದೈಹಿಕವಾಗಿ ಸದೃಡರಾಗಲು ಸಾದ್ಯವಾಗುತ್ತದೆ ಎಂದರು.

ಸರಕಾರಿ ನೌಕರರಿಗೆ ಒತ್ತಡ ಜಾಸ್ತಿ. ಕ್ರೀಡೆಗಳಲ್ಲಿ ಭಾಗವಹಿಸುವವರ ಆರೋಗ್ಯ ತಪಾಸಣೆ ಮಾಡಿದ ವರದಿಯಲ್ಲಿ ನೌಕರರ ರಕ್ತದ ಒತ್ತಡ ಹೆಚ್ಚಿಗಿರುವುದು ಕಂಡುಬoದಿದೆ. ಆದ್ದರಿಂದ ಒತ್ತಡದ ಬದುಕಿನಿಂದ ಹೊರಬಂದು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಸ್ಪಾರ್ಧಾ ಮನೋಭಾವನೆ ಮುಖ್ಯವಾಗಿದೆ.

ಸೋಲು-ಗೆಲುವು ಸಾಮಾನ್ಯ. ಕ್ರೀಡೆ ಕೇವಲ ಮನೋರಂಜನೆಗೆ ಮಾತ್ರವಲ್ಲ ದೈಹಿಕ ಮತ್ತು ಮಾನಸಿಕವಾಗಿ ಸದೃಡರನ್ನಾಗಿ ಮಾಡುತ್ತದೆ. ಕಂದಾಯ ನೌಕರರು ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಸಂತೋಷ ಕಾಣಲು ಸಾಧ್ಯವಾಗುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಆರೋಗ್ಯವಂತರಾದಾಗ ಮಾತ್ರ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಕೇವಲ ಉತ್ತಮ ಆಹಾರ ಸೇವಿಸಿದರೆ ಸಾಲದು ಕ್ರೀಡೆ, ವ್ಯಾಯಾಮಗಳಲ್ಲಿ ಅಗತ್ಯವಾಗಿವೆ. ಎರಡು ದಿನಗಳ ಕಾಲ ನಡೆಯುವ ಕ್ರೀಡೋತ್ಸವದಲ್ಲಿ ಉತ್ಸಾಹದಿಂದ ಭಾಗವಹಿಸುವಂತಾಗಬೇಕು. ಅಂದಾಗ ಮಾತ್ರ ನಾವು ಮಾನಸಿಕವಾಗಿ, ದೈಹಿಕವಾಗಿ ಸಬಲರಾಗಲು ಸಾಧ್ಯವೆಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ ನೌಕರರು ವರ್ಷಪೂರ್ತಿ ಕೆಲಸ ಮಾಡಿದ್ದು, ಈ ಎರಡು ದಿನ ಕ್ರೀಡೆಗಳಲ್ಲಿ ಮಹಿಳೆ ಹಾಗೂ ಪುರುಷರು ಪಾಲ್ಗೊಳ್ಳಬೇಕು. ಇದರಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆ ಬರುವದಿಲ್ಲ. ಆರೋಗ್ಯ ಸಹ ಚೆನ್ನಾಗಿ ಇರುತ್ತದೆ. ಸರಕಾರಿ ನೌಕರರು ವರ್ಷದಲ್ಲಿ ಎರಡು ದಿನ  ಕ್ರೀಡಾಪಟು- ಗಳಾಗಬೇಕು ಎಂಬ ಉದ್ದೇಶದಿಂದ  ಈ ವರ್ಷ ಪ್ರಾರಂಭಿಸಲು ನಿರ್ದೇಶನ ನೀಡಿದ ಹಿನ್ನಲೆಯಲ್ಲಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗಿದ್ದು, ಎಲ್ಲರೂ ಭಾಗವಹಿಸಿ ಕ್ರೀಡೆಗೆ ಮೆರಗು ತರಲು ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್ ಕ್ರೀಡಾಕೂಟ ಆಯೋಜನೆ ಕುರಿತು ಮಾತನಾಡಿದರು. ಪ್ರಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಅವರು ಸುಮಾರು 25 ವರ್ಷಗಳ ನಂತರ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರಿಗೆ ಕ್ರೀಡೋತ್ಸವ ಹಮ್ಮಿಕೊಳ್ಳಲಾಗಿದೆ. ಕಂದಾಯ ಇಲಾಖೆ ಮಹತ್ವದ ಇಲಾಖೆಯಾಗಿದ್ದು, ನಮ್ಮ ವ್ಯಯಕ್ತಿಕ ಕೆಲಸಗಳನ್ನು ಬದಿಗೊತ್ತಿ ಕೆಲಸ ಮಾಡುತ್ತಿದ್ದೇವೆ. ಕೆಲಸದ ಜೊತೆಗೆ ಆರೋಗ್ಯ ಮಹತ್ವದಾಗಿದ್ದು, ಈ ಕ್ರೀಡಾಕೂಟ ಒಂದೇ ದಿನಕ್ಕೆ ಸೀಮಿತವಾಗಿರದೇ ನಿರಂತರವಾಗಿ ಇರಬೇಕು ಎಂದರು.

ಕಾರ್ಯಕ್ರಮದಲ್ಲಿ ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ,ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ರಾಜ್ಯ ಕಂದಾಯ ಇಲಾಖೆ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಚಿದಾನಂದ ವಡವಡಗಿ, ಗೌರವಾಧ್ಯಕ್ಷ ಮಲ್ಲಿಕಾರ್ಜುನ ಗುಡೂರ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಪಾಟೀಲ, ತಹಶೀಲ್ದಾರರಾದ ವಾಸುದೇವ ಸ್ವಾಮಿ, ಕಾವ್ಯಾಶ್ರೀ ಎಚ್, ಎಫ್.ಬಿ. ಮೊಮ್ಮನ್ನವರ, ನಿಂಗಪ್ಪ ಬಿರಾದಾರ, ವಿನೋದ ಹತ್ತಳ್ಳಿ, ಅಮರೇಶ ಪಮ್ಮಾರ, ಗಿರೀಶ ಸ್ವಾದಿ, ಸದಾಶಿವ ಮಕ್ಕೋಜಿ, ಮಹಾದೇವ ಸನಮೂರೆ, ವಿಜಯಕುಮಾರ ಕಡಕೋಳ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *