
ಕೋಟ: ದಿನಾಂಕ 19/07/2025 (ಹೊಸಕಿರಣ.com) ಗರಿಕೆ ಮಠದ ಹಾಡಿಯಲ್ಲಿ ಅಂದರ್ ಬಾಹರ್ ಜುಗಾರಿ ಆಡುತ್ತಿದ್ದ ಆರು ಜನರನ್ನು ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸುಧಾಪ್ರಭು ಅವರು ಬಂಧಿಸಿದ್ದಾರೆ.
ಕೋಟ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಸುಧಾ ಪ್ರಭುರವರು ದಿ.18-07-2025 ಠಾಣೆಯಲ್ಲಿರುವಾಗ ಬ್ರಹ್ಮಾವರ ತಾಲೂಕು ಅಚ್ಚಾಡಿ ಗ್ರಾಮದ ಗರಿಕೆಮಠ ಎಂಬಲ್ಲಿಯ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟು ಆಟ ಆಡುತ್ತಿರುವುದಾಗಿ ಸಾರ್ವಜನಿಕ ಮಾಹಿತಿ ಬಂದ ಮೇರೆಗೆ ಕೂಡಲೇ ದಾಳಿ ನಡೆಸಿದ್ದಾರೆ .
ಆಗ ಸ್ಥಳದಲ್ಲಿ ಆಟ ಆಡುತ್ತಿದ್ದವರು ಓಡಿ ಹೋಗಿದ್ದು, ಅದರಲ್ಲಿ ಇಸ್ಪೀಟು ಆಡುತ್ತಿದ್ದ 1. ರಾಜು, 2.ರಮಾನಂದ, 3. ರಾಜು ,4.ಸಂತೋಷ, 5.ರಾಜೀವ, 6.ಕೃಷ್ಣ ಎಂಬವರನ್ನು ಬಂಧಿಸಿದ್ದಾರೆ. ಹಾಗೂ ಇಸ್ಪೀಟು ಜುಗಾರಿ ಆಟಕ್ಕೆ ಬಳಸಿದ ಒಟ್ಟು ನಗದು -3, -2, 15,450/, ಕಾರು 3, ಸ್ಕೂಟರ್ 2, ರೌಂಡ್ ಟೇಬಲ್ -1, ಪ್ಲಾಸ್ಟೀಕ್ ಚೇರ ಗಳು-6, ಇಸ್ಪೀಟ್ ಎಲೆಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಕಲಂ: 87 KP ACT ರಂತೆ ಪ್ರಕರಣ ದಾಖಲಾಗಿದೆ.
Leave a Reply