Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ : ಲೋಕಾಯುಕ್ತ ಬಲೆಗೆ ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕರಾದ ರೇಣುಕಾ, ಪ್ರಥಮ ದರ್ಜೆ ಸಹಾಯಕ ಜಯರಾಮ್

ಉಡುಪಿ : ಫಿರ್ಯಾದುದಾರರ ದೂರಿನ ಮೇಲೆ ಸೌಹಾರ್ದ ಸಹಕಾರ ಸಂಘದ  ಆಡಳಿತ ಚುನಾವಣೆಯ ಲೆಕ್ಕ ಪರಿಶೋಧನ ಮಾಡಿ ಕೊಡಲು ತಲಾ 5000ರಂತೆ ಒಟ್ಟು 10,000ರೂ ಲಂಚಕ್ಕೆ  ಬೇಡಿಕೆ ಇಟ್ಟ ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ರೇಣುಕಾ, ಪ್ರಥಮ ದರ್ಜೆ ಸಹಾಯಕ ಜಯರಾಮ್ ಇಂದು ಹಣ ಪಡೆಯುವಾಗ  ರೆಡ್ ಹ್ಯಾಂಡ್ ಆಗಿ ಉಡುಪಿ ಲೋಕಾಯುಕ್ತ ಪೊಲೀಸ್ ರು  ಬಂಧಿಸಿರುತ್ತಾರೆ.

ಕಾರ್ಯಚರಣೆಯಲ್ಲಿ  ಪ್ರಭಾರ ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ  ಕುಮಾರಚಂದ್ರರವರ ಮಾರ್ಗದರ್ಶನದಲ್ಲಿ ಮಂಜುನಾಥ್ ಶಂಕರ ಹಳ್ಳಿ, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರಾದ ರಾಜೇಂದ್ರ ನಾಯಕ್ ಎಂ.ಎನ್ . ಹಾಗೂ ಮಂಗಳೂರು ಲೋಕಾಯುಕ್ತ  ಪೊಲೀಸ್  ನಿರೀಕ್ಷಕರಾದ ಚಂದ್ರ ಶೇಖರ ಹಾಗೂ ಉಡುಪಿ ಲೋಕಾಯುಕ್ತ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಸತೀಶ್ ಹಂದಾಡಿ, ಮಲ್ಲಿಕಾ, ಪುಷ್ಪಾವತಿ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *