Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಡಾ|| ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರ – 2025 ಶಿಕ್ಷಕರ ಸೂಚನೆಗೆ ಆಹ್ವಾನ

ಕೋಟ: ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್  ಉಡುಪಿ, ರೋಟರಿ ಕ್ಲಬ್ ಕೋಟ ಸಿಟಿ, ಉಸಿರು ಕೋಟ ಇವರ ಸಾರಥ್ಯದಲ್ಲಿ ಕೊಡಮಾಡುವ ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸೂಚನೆಗೆ ಆಹ್ವಾನ ನೀಡಲಾಗಿದೆ. ಸೂಚನೆ ಮಾಡುವ ಪ್ರತಿನಿಧಿಗಳು ಸೂಚಿಸುವ ಶಿಕ್ಷಕರ ಹೆಸರು ಮತ್ತು 5 ಕಾರಣಗಳನ್ನು ವಾಟ್ಸಪ್  ಮೂಲಕ ಈ ನಂಬರಿಗೆ 9663750499 ಕಳಿಸಬೇಕಾಗಿ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಆನಂದ್ ಸಿ. ಕುಂದರ್, ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಉಪಾಧ್ಯಕ್ಷರಾದ ಸರಸ್ವತಿ, ಪಿಡಿಒ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.                        

Leave a Reply

Your email address will not be published. Required fields are marked *