Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಂತೋಷ್ ಮೇಷ್ಟ್ರು ಕುಟುಂಬಕ್ಕೆ ಸಹಾಯಹಸ್ತ ಕಾರ್ಯಕ್ರಮ
ಸಮಾಜಕ್ಕಾಗಿ ಜೀವನ ಮುಡಿಪಾಗಿಟ್ಟ ಸಂತೋಷ್ ಕುಮಾರ್ – ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ

ಕೋಟ: ತನ್ನ ವಯಕ್ತಿಕ ಜೀವನಕ್ಕಾಗಿ ಏನನ್ನು ಬಯಸದೆ ಸಮಾಜಕ್ಕಾಗಿಯೇ ಜೀವನವನ್ನು ಸಮರ್ಪಿಸಿಕೊಂಡ ಜೀವನದ ಯಶೋಗಾಧೆ ಅತ್ಯಮೂಲ್ಯವಾದದ್ದು ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಸೋಮವಾರ ಕೋಟದ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಾಂಸ್ಕೃತಿಕ  ಚಿಂತಕ, ಶಿಕ್ಷಕ ಸಂತೋಷ್ ಕುಮಾರ್ ಕೋಟ ಸಹಾಯರ್ಥವಾಗಿ ಅವರ ಕುಟುಂಬಕ್ಕೆ ನೆರವಾಗುವ ಯಕ್ಷಗಾನ ಕಾರ್ಯಕ್ರಮದಲ್ಲಿ ನಿಧಿ ಹಸ್ತಾಂತರಿಸಿ ಮಾತನಾಡಿ ಜೀವನದಲ್ಲಿ ಪ್ರತಿಕ್ಷಣ. ಪ್ರತಿಜೀವ ಕೂಡಾ ಮಹತ್ವವಾದದ್ದು ಈ ಹಿನ್ನಲ್ಲೆಯಲ್ಲಿ ಪ್ರತಿಯೊಬ್ಬರು ಸಂಚಾರ ವ್ಯವಸ್ಥೆಯಲ್ಲಿ ರಕ್ಷಣೆ ಬೇಕಾಗುವ ಪರಿಕರವನ್ನು ಕಟ್ಟುನಿಟ್ಟಾಗಿ ಧರಿಸಿಕೊಳ್ಳಿ , ನಿವು ನಿಮ್ಮ ಜೀವದ ಬಗ್ಗೆ ಚಿಂತಿಸದಿದ್ದಾಗ ಮನೆಯವರ ಪಾಡು ಶೋಚನೀಯ ವ್ಯವಸ್ಥೆಗೆ ತಲುಪುತ್ತದೆ.

ಈ ದಿಸೆಯಲ್ಲಿ ಅವರ ಕುಟುಂಬಕ್ಕೆ ನೆರವಾಗುವ ಇಂತಹ ಕಾರ್ಯಗಳ ಬಗ್ಗೆ ಮೆಚ್ಚುಗೆ ಸೂಚಿಸಿದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಮಾತನಾಡಿ ಸಂತೋಷ್ ಕುಮಾರ್  ವ್ಯಕ್ತಿತ್ವ ಹಾಗೂ ಅವರಿಗೆ ಸಮಾಜದ ಬಗ್ಗೆ ಇದ್ದ ಕಾಳಜಿ , ಶಿಕ್ಷಣದ ಬಗ್ಗೆ ಇದ್ದ ಅವರ ಪ್ರೇಮವನ್ನು ಸಭೆಯಲ್ಲಿ ನುಡಿತೋರಣದ ಮೂಲಕ ಬಿಚ್ಚಿಟ್ಟರು. ಇದೇ ವೇಳೆ ಸಂತೋಷ್ ಕುಮಾರ್ ಕುಟುಂಬಕ್ಕೆ ನೀಡಬೇಕಾದ ನೆರವಿನ ಸುಮಾರು 5.50ಲಕ್ಷ ರೂಗಳ ನಿಧಿಯನ್ನು ಅವರ ಸಂಬoಧಿಕರಾದ ಮಹೇಶ್ ರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉದ್ಯಮಿ ಬಿಜು ನಾಯರ್,ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ನಿರ್ದೇಶಕರಾದ ಜಿ.ತಿಮ್ಮ ಪೂಜಾರಿ, ಸಿಇಒ ಶರತ್ ಕುಮಾರ್ ಶೆಟ್ಟಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಯಕ್ಷ ಚಿಂತಕ ಪ್ರೋ.ಎಸ್ ವಿ ಉದಯ್ ಕುಮಾರ್ ಶೆಟ್ಟಿ, ಬೇಳೂರು ರಾಘವ ಶೆಟ್ಟಿ, ದಸಂಸ ಮುಖಂಡ ಶ್ಯಾಮ ಸುಂದರ್ ತೆಕ್ಕಟ್ಟೆ, ರಾಜು ಬೆಟ್ಟಿನ ಮನೆ, ಕಾರ್ಯಕ್ರಮ ಸಂಘಟಕರಾದ ಜಯರಾಮ ಶೆಟ್ಟಿ, ಪ್ರಭಾಕರ್ ಪಡುಕರೆ, ನಾಗರಾಜ್ ಪಡುಕರೆ, ಮಂಜುನಾಥ್ ಭಂಡಾರಿ, ಸಾಮಾಜಿಕ ಕಾರ್ಯಕರ್ತ ಕೆ.ದಿನೇಶ್ ಗಾಣಿಗ ಮತ್ತಿತರರು ಇದ್ದರು. ಕಾರ್ಯಕ್ರಮವನ್ನು ಸಂಘಟಕ ನ್ಯಾಯವಾದಿ ಟಿ.ಮಂಜುನಾಥ್ ಗಿಳಿಯಾರು ನಿರ್ವಹಿಸಿದರು. ನಂತರ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಸುಧನ್ವಮೋಕ್ಷ ಯಕ್ಷಗಾನ ಪ್ರದರ್ಶಗೊಂಡಿತು.

ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಾಂಸ್ಕöÈತಿಕ ಚಿಂತಕ,ಶಿಕ್ಷಕ ಸಂತೋಷ್ ಕುಮಾರ್ ಕೋಟ ಸಹಾಯರ್ಥವಾಗಿ ಅವರ ಕುಟುಂಬಕ್ಕೆ ನೆರವಾಗುವ ಯಕ್ಷಗಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ನಿಧಿ ಹಸ್ತಾಂತರಿಸಿ ಮಾತನಾಡಿದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್, ಉದ್ಯಮಿ ಬಿಜು ನಾಯರ್, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ನಿರ್ದೇಶಕರಾದ ಜಿ.ತಿಮ್ಮ ಪೂಜಾರಿ, ಸಿಇಒ ಶರತ್ ಕುಮಾರ್ ಶೆಟ್ಟಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ಇದ್ದರು.

Leave a Reply

Your email address will not be published. Required fields are marked *