
ಕೋಟ: ಇಲ್ಲಿನ ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ದೇವಸ್ಥಾನ ಹಾಗೂ ಪೂಜಾ ಮಂದಿರದ ಅಭಿವೃದ್ಧಿಗೆ ಸಿಎಸ್ ಆರ್ ಯೋಜನೆಯಡಿ ಕರ್ಣಾಟಕ ಬ್ಯಾಂಕ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಮಠಕ್ಕೆ ಭೇಟಿ ನೀಡಿದ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಡಿ.ಜಿ.ಎಂ ವಾದಿರಾಜ್ ಕೆ ಡಿ.ಡಿಯನ್ನು ಶ್ರೀ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ಶ್ರೀಗಳಿಗೆ ಹಸ್ತಾಂತರಿಸಿದರು. ಈ ವೇಳೆ ಶ್ರೀಗಳು ಕೃತಜ್ಞತೆ ಸಲ್ಲಿಸಿ ಆಶ್ರೀವಚನಗೈದು ಮಂತ್ರಾಕ್ಷತೆ ನೀಡಿದರು.
ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಕುಂದಾಪುರ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯಾಯ ,ಕರ್ಣಾಟಕ ಬ್ಯಾಂಕ್ ಐರೋಡಿ ಶಾಖಾ ಪ್ರಭಂದಕ ಮಂಜುನಾಥ್ ಶೇಟ್.ಬಿ,ಸಿಬ್ಬಂದಿ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.
ಕರ್ಣಾಟಕ ಬ್ಯಾಂಕ್ ನಿಂದ ಬಾಳೆಕುದ್ರು ಶ್ರೀ ಮಠದ ಅಭಿವೃದ್ಧಿಗೆ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಡಿ.ಜಿ.ಎಂ ವಾದಿರಾಜ್ ಕೆ ಡಿ.ಡಿಯನ್ನು ಶ್ರೀ ಮಠದ ಶ್ರೀ ಶ್ರೀ ವಾಸುದೇವ ಸದಾಶಿವಾಶ್ರಮ ಶ್ರೀಗಳಿಗೆ ಹಸ್ತಾಂತರಿಸಿದರು. ಕರ್ಣಾಟಕ ಬ್ಯಾಂಕ್ ಕುಂದಾಪುರ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯಾಯ , ಕರ್ಣಾಟಕ ಬ್ಯಾಂಕ್ ಐರೋಡಿ ಶಾಖಾ ಪ್ರಭಂದಕ ಮಂಜುನಾಥ್ ಶೇಟ್.ಬಿ ಇದ್ದರು.













Leave a Reply