ಕೋಟ: ಇಲ್ಲಿನ ಕೋಡಿ ಗ್ರಾಮಪಂಚಾಯತ್ನ ಜನತೆಯ ಬಹುಕಾಲದ ಬೇಡಿಕೆಯಾದ ಅನಾದಿ ಸ್ಥಳದ ಹಕ್ಕುಪತ್ರ ವಿತರಣೆಯ ಕುರಿತು ಬ್ರಹ್ಮಾವರ ತಹಶಿಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ಗುರುವಾರ ದಾಖಲೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸರಕಾರಿ ಅನಾದಿ ಸ್ಥಳ ಪರಿಶೀಲನೆ 1991 ಹಿಂದಿನ ದಾಖಲೆಯನ್ನು ಪರಿಶೀಲಿಸಿ ಪಡೆಯಲಾಯಿತು.
ಉಪತಹಶೀಲ್ದಾರ್ ಚಂದ್ರಹಾಸ ಬಂಗೇರ, ಕೋಟ ಕಂದಾಯ ಅಧಿಕಾರಿ ಮಂಜು ಬಿಲ್ಲವ, ಕೋಡಿ ಗ್ರಾಮಲೆಕ್ಕಿಗ ಗಿರೀಶ್ ಕುಮಾರ್, ಸಹಾಯಕಿ ಸರೋಜ ಪೂಜಾರಿ, ಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ವಿ, ಪ್ರಭಾಕರ ಮೆಂಡನ್, ಕೃಷ್ಣ ಪೂಜಾರಿ, ಸತೀಶ್ ಕುಂದರ್, ಮಾಜಿ ಅಧ್ಯಕ್ಷ ಲಕ್ಷ್ಮಣ್ ಸುವರ್ಣ, ಪಿಡಿಒ ರವೀಂದ್ರ ರಾವ್, ಗ್ರಾಮಸ್ಥರು ಉಪಸ್ಥಿತರಿದ್ದರು.
ಕೋಡಿ ಗ್ರಾಮಪಂಚಾಯತ್ನ ಅನಾದಿ ಸ್ಥಳದ ಹಕ್ಕುಪತ್ರ ವಿತರಣೆಯ ಕುರಿತು ಬ್ರಹ್ಮಾವರ ತಹಶಿಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ಗುರುವಾರ ದಾಖಲೆ ಪರಿಶೀಲನೆ ನಡೆಸಿದರು. ಉಪತಹಶೀಲ್ದಾರ್ ಚಂದ್ರಹಾಸ ಬಂಗೇರ, ಕೋಟ ಕಂದಾಯ ಅಧಿಕಾರಿ ಮಂಜು ಬಿಲ್ಲವ, ಕೋಡಿ ಗ್ರಾಮಲೆಕ್ಕಿಗ ಗಿರೀಶ್ ಕುಮಾರ್, ಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ವಿ ಇದ್ದರು.















Leave a Reply