Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅಧಿಕ ಮಾಸ ಭಜನಾ ಮಹೋತ್ಸವಕ್ಕೆ ಚಾಲನೆ

ಬೆಂಗಳೂರಿನ ಮಲ್ಲೇಶ್ವರದ ಶ್ರೀಕಾಶೀಮಠದಲ್ಲಿ ಚಾತುರ್ಮಾಸ ವೃತ ಕೈಗೊಂಡಿರುವ ಶ್ರೀಕಾಶೀ ಮಠಾಧೀಶರಾದ ಶ್ರೀಶ್ರೀಶ್ರೀ ಸಂಯಮೀಂದ್ರ ತೀರ್ಥ ಶ್ರೀ ಪಾದಂಗಳವರು ಅಧಿಕಮಾಸ ಭಜನಾ ಮಹೋತ್ಸವಕ್ಕೆ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿದರು.

ಈ ಭಜನಾ ಮಹೋತ್ಸವವು 18-07-2023 ರಿಂದ 17-08-2023ರ ವರೆಗೆ ಪ್ರತಿದಿನ ಬೆಳಿಗ್ಗೆ 8:00 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ನಿರಂತರವಾಗಿ ನಡೆಯಲಿದೆ. ಶ್ರೀಗಳಿಂದ ಚಾಲನೆ ದೊರೆತ ನಂತರ ಪುತ್ತೂರು ನರಸಿಂಹ ನಾಯಕ್ ರವರಿಂದ ಭಜನಾ ಮಹೋತ್ಸವ ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *