Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮ -ಶ್ರೀ ಗುರುನರಸಿಂಹ ವಿವಿದೋದ್ಧೇಶ ಸೌಹಾರ್ದ ಸಹಕಾರಿ ಸಂಘ ವಾರ್ಷಿಕ ಸಾಮಾನ್ಯ ಸಭೆ

ಕೋಟ: ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ  ಸಾಲಿಗ್ರಾಮ ಇದರ 14ನೆಯ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಆಡಳಿತ ಕಛೇರಿಯಲ್ಲಿ ಸಹಕಾರಿಯ ಅಧ್ಯಕ್ಷ ಆನಂದ ಸಿ.ಕುಂದರ್‌ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು.

ಈ ವೇಳೆ ಮಾತನಾಡಿದ ಆನಂದ್ ಸಿ ಕುಂದರ್ ಸಂಘವು ಆರಂಭದಿಂದಲೂ ಪ್ರಜ್ಞಾವಂತ ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆ, ದಕ್ಷ ಆಡಳಿತ ಮಂಡಳಿಯ ಮಾರ್ಗದರ್ಶನ ಮತ್ತು ನಿಷ್ಟಾವಂತ ಸಿಬಂದಿಗಳ ಪ್ರಾಮಾಣಿಕ ಸೇವೆಯಿಂದ ಲಾಭದಲ್ಲಿ ಮುನ್ನಡೆಯುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಪ್ರಸ್ತುತ ಸಾಲಿನಲ್ಲಿ ಸಂಘಕ್ಕೆ ಸುಸ್ಸಜ್ಜಿತ ಕಟ್ಟಡ ನಿರ್ಮಿಸಿ ಮುಂದಿನ ಸಾಲಿನಿಂದ ವಾರ್ಷಿಕ ಸಾಮಾನ್ಯ ಸಭೆಯನ್ನು ಸಂಘದ ಕಟ್ಟಡದಲ್ಲಿಯೇ ಜರುಗಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು. ಸಂಘದ ವಿವಿಧ ಸೇವೆಗಳ ಸದುಪಯೋಗ ಪಡೆಯುವಂತೆ ಕರೆಯಿತ್ತರು.

ಗತ ವರ್ಷದಲ್ಲಿ ಸದಸ್ಯರಿಂದ ರೂ. 13.50 ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹಿಸಿ ರೂ. 12.00 ಕೋಟಿಗೂ ಅಧಿಕ ಸಾಲ ವಿತರಿಸಿದೆ. ಸದಸ್ಯರ ಮನ ವಲಿಸೂವುದರ ಮೂಲಕ ಶೇ. 99.99 ರ ವಸೂಲಿ ಸಾಧಿಸಿದೆ. 2023.24ನೇ ಶೈಕ್ಷಣಿಕ ವರ್ಷದಲ್ಲಿ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಶಾಲಾವಾರು ವಿಧ್ಯಾರ್ಥಿ ವಿಧ್ಯಾರ್ಥಿನಿಯರು ಮತ್ತು ಸದಸ್ಯರ ಮಕ್ಕಳನ್ನು ಪುರಸ್ಕರಿಸಿ ಅಭಿನಂದಿಸಲಾಯಿತು.

ಸಂಘದ ಕಾರ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಪ್ರಶಂಸನೀಯ ಸೇವೆ ಸಲ್ಲಿಸುತ್ತಿರುವ ಹಿರಿಯ ನಾಗರಿಕರುಗಳಾದ  ಸುಧೀಂದ್ರ ಐತಾಳ ಚಿತ್ರಪಾಡಿ, ಮಂಜುನಾಥ ಗುಂಡ್ಮಿ, ಜಯರಾಮ ಶೆಟ್ಟಿ ಮಣೂರು, ವೆಂಕಟರಮಣ ನಾವಡ, ಲಕ್ಷಿö್ಮ ಕಾರ್ಕಡ, ಮತ್ತು ಅಕ್ಕಯ್ಯ ಮಣೂರು ಇವರುಗಳನ್ನು ಗೌರವಿಸಿ ಅಭಿನಂದಿಸಲಾಯಿತು.

ಕಳೆದ ಸಾಲಿನಲ್ಲಿ ಗಳಿಸಿದ ನಿವ್ವಳ ಲಾಭವನ್ನು ವಿಂಗಡಿಸಿ ಸದಸ್ಯರಿಗೆ ಶೇ. 25ರ ಪಾಲು ಲಾಭ ನೀಡಲಾಯಿತು. ಕಳೆದ ನಿರಂತರ ಒಂಭತ್ತು ವರ್ಷಗಳಿಂದ ಶೇ. 25ರ ಗರಿಷ್ಟ ಪಾಲು ಲಾಭ ನೀಡಿ ಪ್ರಾಥಮಿಕ ರಂಗದಲ್ಲಿ ದಾಖಲೆ ನಿರ್ಮಿಸಿದೆ.

ಸಂಘದ ಸ್ಥಾಪಕ ನಿರ್ದೇಶಕರಾಗಿ ಇದು ತನಕ ನಿಸ್ವಾರ್ಥ ಸೇವೆ ಸಲ್ಲಿಸಿ ಇತ್ತೀಚೆಗೆ  ಅಗಲಿದ ಡಾ ಸತೀಶ ಪೂಜಾರಿಯವರ ಅಗಲುವಿಕೆಗೆ ಸಭೆಯು ಎರಡು ನಿಮಿಷಗಳ ಮೌನ ಪ್ರಾರ್ಥನೆ ಸಲ್ಲಿಸಿತು.     
ಸಭೆಯಲ್ಲಿ ಸಂಘದ ನಿರ್ದೇಶಕರುಗಳು ಸಭಾ ಕಾರ್ಯಸೂಚಿಯಂತೆ ವಿಷಯವನ್ನು ಮಂಡಿಸಿ ವಿವರಣೆಗಳನ್ನು ನೀಡಿ ಆನುಮೋದನೆ ಪಡೆದರು.
ಸಭೆಯಲ್ಲಿ ನಿರ್ದೇಶಕರುಗಳಾದ  ಸಂಜೀವ ಜಿ,  ಮಂಜುನಾಥ ಎಸ್.ಕೆ, ಡಾ. ಕೆ ಕೃಷ್ಣ ಕಾಂಚನ್,  ಕೆ ಶಂಕರ ಬಂಗೇರ,  ವಸಂತ ಶೆಟ್ಟಿ,  ವೈ ಕೃಷ್ಣಮೂರ್ತಿ ಐತಾಳ,  ಶಾಂತಾ ಭಟ್ಟ,  ನಾಗರತ್ನ ಬಾಯರಿ, ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಕ  ಜಿ ಎಸ್ ಸೋಮಯಾಜಿ ಹಿಂದಿನ ವರ್ಷದ ವರದಿ ಮಂಡಿಸಿದರು. ಶಾಂತಾ ಭಟ್ಟ ನಿರ್ದೇಶಕಿ ವಂದನಾರ್ಪಣೆಗೈದರು.


ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ  ಸಾಲಿಗ್ರಾಮ ಇದರ 14ನೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಕಾರ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಪ್ರಶಂಸನೀಯ ಸೇವೆ ಸಲ್ಲಿಸುತ್ತಿರುವ ಹಿರಿಯ ನಾಗರಿಕರುಗಳಾದ  ಸುಧೀಂದ್ರ ಐತಾಳ ಚಿತ್ರಪಾಡಿ, ಮಂಜುನಾಥ ಗುಂಡ್ಮಿ, ಜಯರಾಮ ಶೆಟ್ಟಿ ಮಣೂರು, ವೆಂಕಟರಮಣ ನಾವಡ, ಲಕ್ಷ್ಮೀ ಕಾರ್ಕಡ, ಮತ್ತು ಅಕ್ಕಯ್ಯ ಮಣೂರು ಇವರುಗಳನ್ನು ಗೌರವಿಸಿ ಅಭಿನಂದಿಸಲಾಯಿತು.

Leave a Reply

Your email address will not be published. Required fields are marked *