Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಳದಲ್ಲಿ ವಿಟ್ಲಪಿಂಡಿ ಮಹೋತ್ಸವ

ಕೋಟ: ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಳದಲ್ಲಿ ಬುಧವಾರ ವಿಟ್ಲಪಿಂಡಿಯನ್ನು ಸಂಭ್ರಮದಿಂದ  ಆಚರಿಸಲಾಯಿತು. ಆ ಪ್ರಯುಕ್ತ ಶ್ರೀದೇವರು ಪಲ್ಲಕಿ ಉತ್ಸವ ಮೆರವಣಿಗೆಯಲ್ಲಿ ಮೊಸರು ಕುಡಿಕೆಗಳನ್ನ ಒಡೆಯುತ್ತ ಯಡಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಹೋಗಿ ಅಲ್ಲಿಯ ಗ್ರಾಮಸ್ಥರಿಂದ ಪೂಜೆಯನ್ನು ಸ್ವೀಕರಿಸಿ ಶ್ರೀ ಆಂಜನೇಯ ದೇವಳಕ್ಕೆ ಬಂದು ಅಲ್ಲಿ ಅಷ್ಟಾವಧಾನ ಪೂಜೆ ಪೂರೈಸಿ ನಂತರ ಶ್ರೀ ದೇವಳಕ್ಕೆ ಹಿಂತುರಗಲಾಯಿತು.

ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ ಕೆ. ಎಸ್ ಕಾರಂತ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಕೂ. ಮ. ಜ ಸಾಲಿಗ್ರಾಮ ಅಂಗಸಂಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿ ಮತ್ತು ಪದಾಧಿಕಾರಿಗಳು  ಗ್ರಾಮಮೋಕ್ತೇಸರರು ಹಾಗು ಮತ್ತಿತ್ತರು ಉತ್ಸವದಲ್ಲಿ ಪಾಲ್ಗೊಂಡರು.


ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಳದಲ್ಲಿ ಬುಧವಾರ ವಿಟ್ಲಪಿಂಡಿಯನ್ನು ಸಂಭ್ರಮದಿAದ  ಆಚರಿಸಲಾಯಿತು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ ಕೆ. ಎಸ್ ಕಾರಂತ, ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ತುಂಗ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *