Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟತಟ್ಟು ಗ್ರಾಮ ಪಂಚಾಯತ್‌ಗೆ ಜಿ.ಪಂ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ ಅವರು ಭೇಟಿ

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್‌ಗೆ ಗುರುವಾರ ಮೊದಲ ಬಾರಿಗೆ ಉಡುಪಿ ಜಿಲ್ಲಾ ಪಂಚಾಯತ್‌ನ ನೂತನ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ ಅವರು ಭೇಟಿ ನೀಡಿದರು.

ಗ್ರಾಮ ಪಂಚಾಯತಿ ವಿವಿಧ ದಾಖಲೆಗಳು, ಎಸ್‌ಎಲ್‌ಆರ್‌ಎಮ್ ಘಟಕ, ಸ್ಮಶಾನ ಅಭಿವೃದ್ಧಿ ಕಾಮಗಾರಿ ಹಾಗೂ ಚಿಟ್ಟಿಬೆಟ್ಟು ಕೊರಗ ಕಾಲೋನಿಯಲ್ಲಿ  ತಲಾ ೧೦ ಲಕ್ಷ ಅಂದಾಜು ಪಟ್ಟಿಯ ೮ ಕೊರಗ  ಕಾಲೋನಿಯ ಹೊಸ ಮನೆಯ ನಿರ್ಮಾಣದ ಪ್ರಗತಿ ಹಂತವನ್ನು ವೀಕ್ಷಿಸಿ ಶ್ಲಾಘನೆ ವ್ಯಕ್ತಪಡಿಸಿದರು ಹಾಗೂ ಕೆಲವೊಂದು ಸಲಹೆ ಸೂಚನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಯೋಜನಾಧಿಕಾರಿಯವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಸದಸ್ಯರಾದ  ವಾಸು ಪೂಜಾರಿ, ಸೀತಾ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ  ರವೀಂದ್ರ ರಾವ್, ಕಾರ್ಯದರ್ಶಿ  ಸುಮತಿ ಅಂಚನ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೋಟತಟ್ಟು ಗ್ರಾಮ ಪಂಚಾಯತ್‌ಗೆ ಜಿ.ಪಂ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ ಅವರು ಭೇಟಿ ನೀಡಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಸದಸ್ಯರಾದವಾಸು ಪೂಜಾರಿ, ಸೀತಾ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *