Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಲಂಚ ಪಡೆದು ಲೋಕಾಯುಕ್ತ ರಿಗೆ ಸಿಕ್ಕಿಬಿದ್ದ ಭ್ರಷ್ಟ  ಗ್ರಾಮ ಲೆಕ್ಕಾಧಿಕಾರಿ ಗಿರೀಶ ರಣದೇವಗೆ 4 ವರ್ಷ ಜೈಲು  ಶಿಕ್ಷೆ ಮತ್ತು 5 ಸಾವಿರ ರೂ ದಂಡ

ಕಾರವಾರ: ಹಳಿಯಾಳ ತಾಲೂಕಿನಲ್ಲಿ  ಗ್ರಾಮ  ಲೆಕ್ಕಾಧಿಕಾರಿಯಾಗಿ ಕರ್ತ್ಯವ  ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಜಮೀನು ಖಾತೆ ಬದಲಾವಣೆಗೆ ಲಂಚ ಬೇಡಿ ಲೋಕಾಯುಕ್ತ ರಿಗೆ ಸಿಕ್ಕಿಬಿದ್ದ  ಗ್ರಾಮ ಲೆಕ್ಕಾಧಿಕಾರಿ ಗಿರೀಶ ರಣದೇವಗೆ 4 ವರ್ಷ ಜೈಲು ಹಾಗೂ 5 ಸಾವಿರ ರೂ ದಂಡ ವಿಧಿಸಿ ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಆದೇಶಿಸಿದ್ದಾರೆ.

2019ರಲ್ಲಿ ಹಳಿಯಾಳದಲ್ಲಿ ಕೆಲಸ ಮಾಡುತ್ತಿದ್ದಾಗ ಗಿರೀಶ ರಣದೇವ್ ಲಂಚ ಸ್ವೀಕರಿಸಿ ಲೋಕಾಯುಕ್ತ ರಿಗೆ ಸಿಕ್ಕಿ ಬಿದ್ದಿದ್ದರು. ಜಮೀನಿನ ಖಾತೆ ಬದಲಾವಣೆ ಮಾಡಿ ಕೊಡಲು ರೈತರೊಬ್ಬರಿಂದ ಗಿರೀಶ ರಣದೇವ ರೂ 3000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಪಡೆಯುವಾಗ   ಲೋಕಾಯುಕ್ತ ರಿಗೆ ಸಿಕ್ಕಿ ಬಿದ್ದ ಹಿನ್ನಲೆ ಆಪಾದಿತ ನೌಕರರ ವಿರುದ್ದ ದೋಷಾರೋಪಣ ಪತ್ರ ಸಲ್ಲಿಕೆಯಾಗಿತ್ತು.

ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಆಭಿಯೋಜಕ ಲಕ್ಷಿö್ಮಕಾಂತ ಎಮ್ ಪ್ರಭು ವಾದಿಸಿದ್ದರು.

Leave a Reply

Your email address will not be published. Required fields are marked *