Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕ್ರೀಡೆಗಳಿಂದ ಆರೋಗ್ಯ ವೃದ್ಧಿಸಿಕೊಳ್ಳಿ :  ಡಿ ಸಿ ಜಾನಕಿ

ವರದಿ : ಅಶ್ವಿನಿ ಅಂಗಡಿ

ಬಾಗಲಕೋಟೆ :  ಯಾರೇ ಪ್ರಥಮ ಬಂದರೂ ನಾವೇ ಪ್ರಥಮ ಬಂದ ರೀತಿ ತಿಳಿದುಕೊಳ್ಳುವ ಕ್ರೀಡಾ ಸ್ಮನೋಭಾವ ಹೊಂದಿ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ,  ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ನಮ್ಮ ಮಕ್ಕಳಿಗೂ ಸಹ ಕ್ರೀಡಾ ಆಸಕ್ತಿ ಬೆಳೆಯಲು ಸಹಾಯಮಾಡುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಹೇಳಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಜಿಲ್ಲಾ ಶಾಖೆ ಬಾಗಲಕೋಟೆಯ ಸಂಯುಕ್ತ ಆಶ್ರಯದಲ್ಲಿ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು,

ಪ್ರತಿದಿನವೂ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ನೌಕರರಿಗೆ ಈ ರೀತಿಯ ವೇದಿಕೆಗಳು ಸಿಕ್ಕಾಗ ಇದರ ಸದುಪಯೋಗ ಪಡೆದುಕೊಂಡು ಸಂತೋಷದಿAದ ಮತ್ತು ಮನರಂಜನಾತ್ಮಕವಾಗಿ ಭಾಗವಹಿಸಿ, ಕ್ರೀಡೆಯಲ್ಲಿ ಬಹುಮಾನಗಳಿಗಾಗಿ ಅಲ್ಲ, ಬದಲಾಗಿ ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿದರೆ ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ. ಬಳ್ಳಾರಿ, ಈ ಬಾರಿಯ ಕ್ರೀಡಾಕೂಟದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದಾರೆ, ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿದೆ. ಈ ಕಾರ್ಯದಲ್ಲಿ ಸಕಾರಾತ್ಮಕವಾಗಿ ತೊಡಗಿಸಿಕೊಳ್ಳಲು ದೈಹಿಕ ಹಾಗೂ ಮಾನಸಿಕ ಆರೋಗ್ಯ ಮುಖ್ಯವಾಗಿದೆ. ಆದ್ದರಿಂದ ಈ ರೀತಿಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಒಳ್ಳೆಯದು ಎಂದು ತಿಳಿಸಿದರು. ಕ್ರೀಡಾಪಟುಗಳಿಗೆ ಆರ್.ಬಿ. ರಾಂಪೂರ ರವರು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಸಿ. ಡೂಗನವರ, ಕ.ರಾ.ಸ. ನೌ. ಸಂಘದ ರಾಜ್ಯ ಉಪಾಧ್ಯಕ್ಷರು ಮತ್ತು ರಾಜ್ಯ ಪರಿಷತ್ ಸದಸ್ಯರಾದ ಸಂಜೀವರೆಡ್ಡಿ, ವಿ. ಸತ್ಯರೆಡ್ಡಿ, ಜಿಲ್ಲಾ ಖಜಾಂಚಿ ಗೋಪಾಲ್ ಎನ್. ನಿಲಾಯಕ್, ಗೌರವಾಧ್ಯಕ್ಷ  ಸುರೇಶ್ ಎಸ್. ಇಂಜಗನೇರಿ ಹಾಗೂ ಎಲ್ಲಾ ತಾಲೂಕು ಅಧ್ಯಕ್ಷರು ಮತ್ತು ಕ್ರೀಡಾಪಟುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *