
ಕೋಟ: ಸ್ವಚ್ಛ ಭಾರತ ಕಲ್ಪನೆ ದೇಶಾದ್ಯಂತ ಪಸರಿಸಿ ಕೊಂಡಿರುವಾಗ ಅದಕ್ಕಾಗಿ ನಾವೆಲ್ಲರೂ ಪಣತೊಡಬೇಕು ಎಂದು ಮೊಗವೀರ ಯುವ ಸಂಘದ ಕೋಟೇಶ್ವರ ಘಟಕದ ಮಾಜಿ ಅಧ್ಯಕ್ಷ ಸುನೀಲ್ ನಾಯ್ಕ್ ಹೇಳಿದರು.
ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್ , ಜೆಸಿಐ ಸಿನಿಯರ್ ಲಿಜನ್ ಕೋಟ ಇವರ ಸಹಯೋಗದೊಂದಿಗೆ ಮೊಗವೀರ ಯುವ ಸಂಘಟನೆ ಕೋಟೇಶ್ವರ ಇವರ ಸಂಯೋಜನೆಯೊoದಿಗೆ 271ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕುಂಭಾಶಿಯ ಆನೆಗುಡ್ಡೆ ಶ್ರೀವಿನಾಯಕ ದೇಗುಲದ ಪರಿಸರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ ಸಮಾಜಮುಖಿ ಕಾರ್ಯದ ಜತೆ ಪಂಚವರ್ಣ ಸಂಘಟನೆ ನಿರಂತರ ಪರಿಸರದ ಕಾಳಜಿ ಶ್ಲಾಘನೀಯ ಎಂದರು.

ಇದೇ ವೇಳೆ ದೇಗುಲದ ವತಿಯಿಂದ ಎಲ್ಲಾ ಸ್ವಚ್ಛತಾ ತಂಡಗಳ ಪರವಾಗಿ ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ರಾಘವೇಂದ್ರ ಕೊಮೆ ಇವರನ್ನು ಸನ್ಮಾನಿಸಿ ಪ್ರಸಾದ ನೀಡಿ ಗೌರವಿಸಲಾಯಿತು.
ದೇಗುಲದ ಮುಕ್ತೇಸರ ಶ್ರೀಮರಣ ಉಪಾಧ್ಯಾ ಮಾರ್ಗದರ್ಶನದಲ್ಲಿ ಅವರ ಪರವಾಗಿ ದೇಗುಲದ ಪ್ರಭಂಧಕ ನಟರಾಜ್ ಕಾರಂತ ಸಂಘಟಕರನ್ನು ಗುರುತಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಆಚಾರ್, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್,ಗಿರೀಶ್ ಆಚಾರ್,ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್,ಮೊಗವೀರ ಯುವ ಸಂಘದ ಗೌರವಾಧ್ಯಕ್ಷ ಆನಂದ್ ಕುಂದರ್,ಕಾರ್ಯದರ್ಶಿ ನೆಗಿ ನಾಗರಾಜ್ ತೆಕ್ಕಟ್ಟೆ,ಪದಾಧಿಕಾರಿಗಳಾದ ರಾಜೇಶ್ ಕಾಂಚನ್ ಮತ್ತಿತರರು ಇದ್ದರು. ರವೀಂದ್ರ ಕೋಟ ಕಾರ್ಯಕ್ರಮ ನಿರೂಪಿಸಿ ಸಂಯೋಜಿಸಿದರು.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮೊಗವೀರ ಯುವ ಸಂಘಟನೆ ಕೋಟೇಶ್ವರ ಇವರ ಸಂಯೋಜನೆಯೊoದಿಗೆ 271ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕುಂಭಾಶಿಯ ಆನೆಗುಡ್ಡೆ ಶ್ರೀವಿನಾಯಕ ದೇಗುಲದ ಪರಿಸರ ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇಗುಲದ ಮುಕ್ತೇಸರ ಶ್ರೀಮರಣ ಉಪಾಧ್ಯಾ ಮಾರ್ಗದರ್ಶನದಲ್ಲಿ ಅವರ ಪರವಾಗಿ ದೇಗುಲದ ಪ್ರಭಂಧಕ ನಟರಾಜ್ ಕಾರಂತ ಸಂಘಟಕರನ್ನು ಗುರುತಿಸಿ ಗೌರವಿಸಿದರು. ಮೊಗವೀರ ಯುವ ಸಂಘದ ಕೋಟೇಶ್ವರ ಘಟಕದ ಮಾಜಿ ಅಧ್ಯಕ್ಷ ಸುನೀಲ್ ನಾಯ್ಕ್, ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ರಾಘವೇಂದ್ರ ಕೊಮೆ, ಕೋಟದ ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಆಚಾರ್, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಇದ್ದರು.
Leave a Reply